- Advertisement -
- Advertisement -
ಖಾಸಗಿ ಶಾಲೆಯ ವಾರ್ಷಿಕ ಕ್ರೀಡಾಕೂಟದ ವೇಳೆ ವಿದ್ಯುತ್ ಶಾಕ್ ನಿಂದ ಪೋಷಕರೊಬ್ಬರು ಮೃತಪಟ್ಟಿದ್ದು, ವಿದ್ಯಾರ್ಥಿಯೊಬ್ಬ ಗಂಭೀರ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ತಾಲೂಕಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕಲ್ಲಂಕರಾಯನಕುಂಟೆ ಗ್ರಾಮದ ಶ್ರೀರಾಮಕೃಷ್ಣ ಶಾರದಾದೇವಿ ಶಾಲೆಯಲ್ಲಿ ಆಯೋಜಿದ್ದ ಪೋಷಕರ ಕ್ರೀಡಾಕೂಟದ ವೇಳೆ ಈ ವಿದ್ಯುತ್ ಅವಘಡ ಉಂಟಾಗಿದೆ. ನಾಗೇನಹಳ್ಳಿ ನಿವಾಸಿ ರಾಘವೇಂದ್ರ ಎಂದು ಗುರುತಿಸಲಾಗಿದೆ.
ಪೋಷಕರ ಕ್ರೀಡಾಕೂಟಕ್ಕಾಗಿ ಶಾಲಾ ಆವರಣದಲ್ಲಿ ದೊಡ್ಡ ಪೆಂಡಾಲ್ ಹಾಕಿದ್ದು, ಜೋರಾಗಿ ಗಾಳಿ ಬೀಸಿದ್ದರಿಂದ ಪೆಂಡಾಲ್ ಹಾರಿ ಹೈಟೆನ್ಷನ್ ತಂತಿಗೆ ತಗುಲಿದೆ. ಇದರಿಂದ ಪೆಂಡಲ್ ಕೆಳಗೆ ಇದ್ದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯುತ್ ಪಸರಿಸಿದ್ದು ರಾಘವೇಂದ್ರ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -