


ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 6 ದಿನ ವಿಶೇಷ ತನಿಖಾ ತಂಡದ (ಎಸ್ಐಟಿ) ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ಜರ್ಮನಿಯ ಮ್ಯೂನಿಕ್ನಿಂದ ತಡರಾತ್ರಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿ ಸಿಐಡಿ, ಎಸ್ಐಟಿ ಕಚೇರಿಗೆ ಕರೆ ತಂದಿದ್ದರು. ಬಳಿಕ ಎಸ್ಐಟಿ ಕಚೇರಿಯಲ್ಲೇ ಇಡೀ ರಾತ್ರಿ ಕಳೆದ ಪ್ರಜ್ವಲ್ ಅವರನ್ನು ಮೇ 31ರಂದು ಬೆಳಗ್ಗೆ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಪೊಲೀಸರು 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ವಿಚಾರಣೆ ವೇಳೆ ಎಸ್ಐಟಿ 15 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿತ್ತು.
ಎಸ್ಐಟಿ ಮನವಿ ಪುರಸ್ಕರಿಸಿದ ಕೋರ್ಟ್, ಪ್ರಜ್ವಲ್ ರೇವಣ್ಣನನ್ನು ಏಳು ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಎಸ್ಐಟಿ ಪರವಾಗಿ ಎಸ್ಪಿಪಿ ಅಶೋಕ್ ನಾಯಕ್ ಅವರು ವಾದ ಮಂಡಿಸಿದರೆ, ಪ್ರಜ್ವಲ್ ಪರ ಅರುಣ್ ವಾದ ಮಂಡಿಸಿದರು.
ಎಸ್ಐಟಿ ಕಚೇರಿಯಲ್ಲೇ ರಾತ್ರಿ ಕಳೆದ ಪ್ರಜ್ವಲ್ ಅವರನ್ನು ಇಂದು ಬೆಳಗ್ಗೆ ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆ ತುರ್ತು ನಿಗಾ ಘಟಕದ ಕಟ್ಟಡದಲ್ಲಿ ಬಿಪಿ, ಶುಗರ್, ಪಲ್ಸ್, ಹಾರ್ಟ್ ರೇಟ್, ಯೂರಿನ್, ರಕ್ತ ಪರೀಕ್ಷೆ ನಡೆಸಲಾಯಿತು.
ಈ ಪರೀಕ್ಷೆಯ ನಂತರ ಪೊಲೀಸರು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ವಿಚಾರಣೆ ವೇಳೆ ಎಸ್ಐಟಿ 15 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿತ್ತು. ಮಧ್ಯಾಹ್ನದ ನಂತರ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ 6 ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿತು.