- Advertisement -
- Advertisement -



ವಿಟ್ಲ: ಠಾಣೆಯ ಪೊಲೀಸ್ ನೀರಿಕ್ಷಕರಾದ ನಾಗರಾಜ್ ಹೆಚ್ ಇ ಅವರು ಉಪ್ಪಿನಂಗಡಿ ಠಾಣೆಗೆ ವರ್ಗಾವಣೆಯಾಗಿದ್ದಾರೆ.
ವಿಟ್ಲ ಠಾಣೆಯ ನೂತನ ಪೊಲೀಸ್ ನಿರೀಕ್ಷಕರಾಗಿ ಪ್ರಕಾಶ್ ದೇವಾಡಿಗ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರವಿ ಬಿ. ಎಸ್ ಅವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಪೋಲೀಸ್ ನಿರೀಕ್ಷಕರಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಪ್ರಕಾಶ್ ದೇವಾಡಿಗರವರು ಈ ಹಿಂದೆ ವಿಟ್ಲ ಠಾಣೆಯಲ್ಲಿ ಸಬ್ಇನ್ಸ್ಪೆಕ್ಟರ್ ಆಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು. ನಂತರ ವಿಟ್ಲ ಠಾಣೆಯು ಇನ್ಸ್ಪೆಕ್ಟರ್ ಸ್ಟೆಷನ್ ಆಗಿ ಅಪ್ಗ್ರೇಡ್ ಪಡೆದಿತ್ತು.
- Advertisement -








