- Advertisement -
- Advertisement -
ಸುರತ್ಕಲ್: ತುಳುನಾಡಿನ ಅವಳಿ ವೀರರೆಂದೇ ಕರೆಯಿಸಿಕೊಳ್ಳುವ ಕೋಟಿ ಚೆನ್ನಯರ ಬಗ್ಗೆ ,ಬಿಲ್ಲವ ಮುಖಂಡ ಜನಾರ್ಧನ ಪೂಜಾರಿ ಹಾಗೂ ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಮೂಡಬಿದ್ರೆ ಬಳಿಯ ಗರಡಿಯಲ್ಲಿ ಕ್ಷಮೆಯಾಚನೆ ಮಾಡಿದ್ದಾರೆ.
ಜಗದೀಶ್ ಅಧಿಕಾರಿಯವರು ಕೋಟಿ ಚೆನ್ನಯರ ಗರೋಡಿಗೆ ಬಂದು ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡೆ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದರು. ಬಳಿಕ ಫೇಸ್ ಬುಕ್ ಲೈವ್ ನಲ್ಲಿಯೂ, ಅಧಿಕಾರಿ ಮೂರು ದಿನಗಳ ಒಳಗೆ ಕ್ಷಮೆ ಯಾಚಿಸದಿದ್ದರೆ ಸಮುದಾಯದ ಯಾರಾದರೂ ಯುವಕರು ಅಧಿಕಾರಿ ಮುಖಕ್ಕೆ ಮಸಿ ಬಳಿಯಲು ಮುಂದೆ ಬಂದಲ್ಲಿ ಅವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದರು.
ಇದೀಗ ಜಗದೀಶ್ ಅಧಿಕಾರಿ ಕ್ಷಮೆಯಾಚಿಸಿದ ಹಿನ್ನಲೆಯಲ್ಲಿ ಘೋಷಿಸಿದ್ದ 1 ಲಕ್ಷ ರೂ. ಬಹುಮಾನವನ್ನು ಸಮಾಜದ ಬಡ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ನೀಡುವುದಾಗಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ.
- Advertisement -