Friday, April 26, 2024
spot_imgspot_img
spot_imgspot_img

ಮಂಗಳೂರು: ಬಿಜೆಪಿ ಸರಕಾರಕ್ಕೆ ಧಿಕ್ಕಾರಕೂಗಿದ ಹಿಂದು ಸಂಘಟನೆ ಕಾರ್ಯಕರ್ತರು.! ದೇವಸ್ಥಾನ ಒಡೆದು ಹಾಕಿದ ಕ್ರಮವನ್ನು ಖಂಡಿಸಿ ಹಿಂದು ಸಂಘಟನೆ ಕಾರ್ಯಕರ್ತರ ಪ್ರತಿಭಟನೆ

- Advertisement -G L Acharya panikkar
- Advertisement -

ಮಂಗಳೂರು : ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ಒಡೆದು ಹಾಕಿದ ಕ್ರಮವನ್ನು ಖಂಡಿಸಿ ಹಿಂದು ಸಂಘಟನೆ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಮಲ್ಲಿಕಟ್ಟೆ ವೃತ್ತದಲ್ಲಿ ವಿಶ್ವ ಹಿಂದುಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಮೆರವಣಿಗೆ ನಡೆಸಿ, ಪ್ರತಿಭಟಿಸಿದ್ದಾರೆ. ಈ ವೇಳೆ, ಬಿಜೆಪಿ ಸರಕಾರಕ್ಕೆ ಧಿಕ್ಕಾರಕೂಗಿದ್ದಾರೆ.

ಹಿಂದುಗಳ ಹೆಸರಲ್ಲಿ ಆಡಳಿತಕ್ಕೆ ಬಂದವರು ಹಿಂದು ವಿರೋಧಿಯಾಗಿ ನಡೆದುಕೊಂಡಿದ್ದಾರೆ. ದೇವಾಲಯ ಕೆಡವಿದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಘೋಷಣೆ ಕೂಗಿದ್ದಾರೆ. ಈ ಕೂಡಲೇ ದೇಗುಲ ಒಡೆಯುವ ನಿರ್ಧಾರದಿಂದ ರಾಜ್ಯ ಸರಕಾರ ಹಿಂದಕ್ಕೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ. ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಬಿಜೆಪಿಗೆ ಧಿಕ್ಕಾರ, ಬಿಜೆಪಿಗೆ ಧಿಕ್ಕಾರ ಎನ್ನುತ್ತಾ ಘೋಷಣೆ ಕೂಗಿದ್ದಾರೆ.

ದೇವಸ್ಥಾನ ಒಡೆದು ಹಾಕಿರುವ ಘಟನೆಯ ಹಿಂದೆ ಷಡ್ಯಂತ್ರ ವಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಯಾರು ತಪ್ಪಿತಸ್ಥರಿದ್ದಾರೆ, ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರನ್ನು ಕೂಡಲೇ ಅಮಾನತು ಗೊಳಿಸಬೇಕು ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.

driving
- Advertisement -

Related news

error: Content is protected !!