- Advertisement -
- Advertisement -
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಯುವಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಜಿಹಾದಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವಮುಖಂಡ ದಿ|ಪ್ರವೀಣ್ ನೆಟ್ಟಾರು ಅವರ ಸ್ಮೃತಿ ದಿನ ಹಾಗೂ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಬೆಳ್ಳಾರೆಯ ಪೆರುವಾಜೆ ಜೆ.ಡಿ. ಆಡಿಟೋರಿಯಂನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪ್ರವೀಣ್ ನೆಟ್ಟಾರು ಮನೆಯ ಪರಿಸರದಲ್ಲಿರುವ ಅವರ ಪುತ್ಥಳಿಗೆ ಮಾಲಾರ್ಪಾಣೆ ಮಾಡಲಾಯಿತು. ಬಳಿಕ ಜೆ.ಡಿ ಆಡಿಟೋರಿಯಂನಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ದೀಪವನ್ನು ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕೃಷ್ಣ ಎಂ ಆರ್, ಪ್ರವೀಣ್ ಅವರ ತಂದೆ ಶೇಖರ ಪೂಜಾರಿ ದಂಪತಿಗಳು ವೇದಿಕೆಯಲ್ಲಿದ್ದರು. ಕಾರ್ಯಕರ್ತರು, ರಕ್ತದಾನಿಗಳು, ಉಪಸ್ಥಿತಿದ್ದರು.
- Advertisement -