Monday, June 30, 2025
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ; ಪುತ್ತೂರಿನಲ್ಲೂ ಬಿಜೆಪಿ ಪಕ್ಷದ ಜವಾಬ್ದಾರಿ ಹೊಂದಿರುವ ಹಲವು ಕಾರ್ಯಕರ್ತರ ರಾಜೀನಾಮೆ..!

- Advertisement -
- Advertisement -

ಪುತ್ತೂರು: ಪ್ರವೀಣ್ ಹತ್ಯೆ ಹಿನ್ನೆಲೆ ಬಿಜೆಪಿ ವಿರುದ್ಧ ಆಕ್ರೋಶಿತರಾದ ಪಕ್ಷದ ಜವಾಬ್ದಾರಿ ಹೊಂದಿರುವ ಹಲವು ಪ್ರಮುಖರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ.

ಬಿಜೆಪಿ ವಿರುದ್ಧ ಆಕ್ರೋಶಿತರಾದ ಪಕ್ಷದ ಜವಾಬ್ದಾರಿ ಹೊಂದಿರುವ ಹಲವು ಪ್ರಮುಖರು ಪಕ್ಷದಲ್ಲಿನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಪುತ್ತೂರು ಗ್ರಾಮಾಂತರ ಮಂಡಲದ ಅರಿಯಡ್ಕ ಶಕ್ತಿ ಕೇಂದ್ರದ ಅಧ್ಯಕ್ಷ ಸಚಿನ್ ಪಾಪೆಮಜಲು, ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಹಾಗೆಯೇ ಬಿಜೆಪಿ ಯುವಮೋರ್ಚಾ ಸ್ಥಾನಕ್ಕೆ ಚಂದ್ರಹಾಸ ಈಶ್ವರಮಂಗಲ ರವರು ರಾಜೀನಾಮೆ ನೀಡಿದ್ದು, ಅದೇ ರೀತಿ, ಕೊಡಿಪ್ಪಾಡಿಯ ಮನ್ಮಥ್ ರೈ ರವರು ತಮ್ಮ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹಾಗೆಯೇ ನೆಟ್ಟಣಿಗೆ ಮುನ್ನೂರು, ಪುತ್ತೂರು, ಶಿವಮೊಗ್ಗ ಸೇರಿದಂತೆ ಹಲವಾರು ಕಡೆ ಪಕ್ಷದ ಜವಾಬ್ದಾರಿ ಹೊಂದಿರುವ ಹಲವು ಪ್ರಮುಖರು ಬಿಜೆಪಿ ಪಕ್ಷದಲ್ಲಿರುವ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

- Advertisement -

Related news

error: Content is protected !!