Wednesday, May 8, 2024
spot_imgspot_img
spot_imgspot_img

ಬೆಳ್ಳಂಬೆಳಗ್ಗೆ ಕಾನೂನು ಕಾಲೇಜು ನಿವೃತ್ತ ಪ್ರಾಂಶುಪಾಲರ ಕೊಲೆ

- Advertisement -G L Acharya panikkar
- Advertisement -

ಹುಬ್ಬಳ್ಳಿ: ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ವಾಸವಿದ್ದ ಗದಗನ ಕಾನೂನು ಕಾಲೇಜು
ನಿವೃತ್ತ ಪ್ರಾಂಶುಪಾಲರ ಕೊಲೆ ಬೆಳ್ಳಂಬೆಳಗ್ಗೆ ನಡೆದಿರುವುದು ಸ್ಥಳಿಯರನ್ನು ಬೆಚ್ಚಿ ಬೀಳಿಸಿದೆ. ಗದಗನ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಆನಂತರ ಪ್ರಾಂಶುಪಾಲರಾಗಿ ನಿವೃತ್ತರಾದ ಶಂಕ್ರಪ್ಪ ಮುಶನ್ನವರ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಅವರು ಇತ್ತಿಚೀಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನಿಂದಲೇ ಮಾವನ ಕೊಲೆ ನಡೆದಿರುವ ಶಂಕೆ‌ಗಳಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ, ಮೃತ ಶಂಕ್ರಪ್ಪ ಅವರ ಶವವನ್ನು ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆ ಗಾಗಿ ರವಾನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!