- Advertisement -
- Advertisement -



ಉಡುಪಿ: ವಿಚಾರಾಧೀನ ಖೈದಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಿರಿಯಡ್ಕದ ಜಿಲ್ಲಾ ಕಾರಾಗೃಹದಲ್ಲಿ ಸಂಭವಿಸಿದೆ.
ಸಾವನ್ನಪ್ಪಿದ ಖೈದಿ ಅನುಪ್ ಶೆಟ್ಟಿ (38) ಎಂದು ತಿಳಿದು ಬಂದಿದೆ.
ಅನೂಪ್ ಗೆ ಎದೆನೋವು ಕಾಣಿಸಿಕೊಂಡ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿಮಧ್ಯೆ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.
ಕುಂದಾಪುರದ ಫೈನಾನ್ಶಿಯರ್ ಅಜೇಂದ್ರ ಶೆಟ್ಟಿ ಎಂಬವರ ಕೊಲೆ ಪ್ರಕರಣದ ಆರೋಪಿಯಾಗಿದ್ದ ಅನೂಪ್ ಶೆಟ್ಟಿ ಎರಡೂವರೆ ವರ್ಷಗಳಿಂದ ವಿಚಾರಾಧೀನ ಖೈದಿಯಾಗಿದ್ದರು.
- Advertisement -