Saturday, June 28, 2025
spot_imgspot_img
spot_imgspot_img

ಖಾಸಗಿ ಬಸ್‌ಗೆ ಬೆಂಕಿ; 25 ಪ್ರಯಾಣಿಕರು ಸಜೀವ ದಹನ

- Advertisement -
- Advertisement -

ಖಾಸಗಿ ಬಸ್‌ವೊಂದಕ್ಕೆ ಬೆಂಕಿಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ 25 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಬುಲ್ದಾನ ಜಿಲ್ಲೆಯ ಸಮ್ರುದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದೆ.

ನಾಗ್ಪುರದಿಂದ ಪುಣೆಗೆ ಸಂಚರಿಸುತ್ತಿದ್ದ ಬಸ್ ಜಿಲ್ಲೆಯ ಸಿಂದ್‌ಖೇಡ್‌ರಾಜಾ ಸಮೀಪ ತಡರಾತ್ರಿ 1.30ರ ಸುಮಾರಿಗೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಬಸ್‌ನ ಚಕ್ರ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ.

ಬಸ್‌ನಲ್ಲಿ 33 ಪ್ರಯಾಣಿಕರಿದ್ದರು. ಇದರಲ್ಲಿ 25 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ಬುಲ್ದಾನ ಎಸ್‌ಪಿ ಸುನಿಲ್‌ ಕದಾಸ್ನೆ ವಿವರಿಸಿದ್ದಾರೆ. ಉಳಿದ ಎಂಟು ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

- Advertisement -

Related news

error: Content is protected !!