Tuesday, May 7, 2024
spot_imgspot_img
spot_imgspot_img

ಉಪ್ಪಿನಂಗಡಿ: ಹಿಮ್ಮುಖವಾಗಿ ಚಲಿಸಿದ ಖಾಸಗಿ ಬಸ್‌ : ಅಂಗಡಿ ಮತ್ತು ವಾಹನಗಳಿಗೆ ಹಾನಿ

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಅಂಗಡಿಗಳು ಹಾಗೂ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದ ಕಾರು ಸೇರಿದಂತೆ ಹಲವು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿರುವ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಚಾಲಕ ಅಜಾಗರೂಕತೆಯಿಂದ ಬಸ್‌ನ್ನು ಹಿಮ್ಮುಖವಾಗಿ ಚಲಾಯಿಸಿದ್ದರಿಂದ ಬಸ್ ವಾಹನಗಳ ಪಾರ್ಕಿಂಗ್ ಪ್ರದೇಶ ದಾಟಿ ಅಂಗಡಿಗೆ ನುಗ್ಗಿದ್ದರಿಂದ ನಾಗರಾಜ್ ಭಟ್ ಎಂಬವರ ಸಿಹಿತಿಂಡಿ ಮತ್ತು ತಂಪು ಪಾನೀಯ ಮಾರಾಟದ ಅಂಗಡಿಗೆ ,ಕಬ್ಬು ಅರೆಯುವ ಯಂತ್ರ ಸೇರಿದಂತೆ ಅಂಗಡಿಯ ಕಪಾಟುಗಳಿಗೂ ಹಾನಿಯಾಗಿದೆ.
ಈ ದುರ್ಘಟನೆಯ ಸಂದರ್ಭ ಕೆಲವೇ ಜನರಿದ್ದರಿಂದ, ಅವರು ಅಲ್ಲಿಂದ ಓಡಿ ಪಾರಾಗಿದ್ದಾರೆ. ಅದೃಷ್ಟವಶಾತ್ ಅಂಗಡಿಯವರು ಅಪಾಯದಿಂದ ಪಾರಾಗಿದ್ದಾರೆ.ಘಟನೆ ಬಗ್ಗೆಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

- Advertisement -

Related news

error: Content is protected !!