- Advertisement -
- Advertisement -
ಮಂಗಳೂರು: ಕೊರೊನಾ ನೆಪದಲ್ಲಿ ಸುಲಿಗೆ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಡಿವೈಎಫ್ಐ ಸಮಿತಿಯಿಂದ ಆರೋಗ್ಯಾಧಿಕಾರಿ ಕಚೇರಿ ಮುಂಭಾಗ ವಿಶಿಷ್ಟವಾಗಿ ಪ್ರತಿಭಟಿಸಲಾಯಿತು.
ಕೊರೋನಾ ರೋಗಿಗಳನ್ನು ಚಿಕಿತ್ಸೆ ಹೆಸರಲ್ಲಿ ವಂಚಿಸಿದ ಖಾಸಗೀ ಆಸ್ಪತ್ರೆಗಳ ವಿರುದ್ದ ಕ್ರಮಕ್ಕೆ ಒತ್ತಾಯಿಸಿ, ಎಲ್ಲಾ ಸೋಕಿಂತರಿಗೂ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆಗಾಗಿ , ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಇಂದು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಮುಂಭಾಗ ಅಣಕು ಹೆಣಗಳನ್ನಿಟ್ಟು ವಿನೂತನ ರೀತಿಯಲ್ಲಿ ಪ್ರತಿಭಟಿಸಲಾಯಿತು.
ಪ್ರತಿಭಟನೆಯಲ್ಲಿ ಡಿವೈಎಫ್ಐ ಜಿಲ್ಲಾದ್ಯಕ್ಷರಾದ ಬಿಕೆ ಇಮ್ತಿಯಾಜ್ ಕಾರ್ಯದರ್ಶಿ ಸಂತೋಷ್ ಬಜಾಲ್, ನಿತಿನ್ ಕುತ್ತಾರ್ , ಆಶಾ ಬೋಳೂರು,ಮನೋಜ್ ವಾಮಂಜೂರು, ರಫೀಕ್ ಹರೇಕಳ, ಅಶ್ರಫ್ ಕೆಸಿರೋಡ್, ಸುನಿಲ್ ತೇವುಲ, ನವೀನ್ ಕೊಂಚಾಡಿ ಮುಂತಾದವರು ಉಪಸ್ಥಿತರಿದ್ದರು.
- Advertisement -