Thursday, July 4, 2024
spot_imgspot_img
spot_imgspot_img

ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ’ಧರ್ಮದೈವ’ ತುಳು ಸಿನಿಮಾ ಜುಲೈ 5 ರಂದು ಕರಾವಳಿಯಾದ್ಯಂತ ತೆರೆಗೆ

- Advertisement -G L Acharya panikkar
- Advertisement -

ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಧರ್ಮದೈವ ತುಳು ಸಿನಿಮಾ ಜುಲೈ 5 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಈ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಧರ್ಮದೈವ ಸಿನಿಮಾದ ನಿರ್ದೇಶಕ ತಿನ್ ರೈ ಕುಕ್ಕುವಳ್ಳಿ ಮಾತನಾಡಿ “ಧರ್ಮ ದೈವ” ಸಿನಿಮಾ ಈಗಾಗಲೇ ಪೂಣೆ ಮುಂಬೈನಲ್ಲಿ ಬಿಡುಗಡೆಗೊಂಡು ಉತ್ತಮ ಪ್ರದರ್ಶನದೊಂದಿಗೆ ಜನ ಮೆಚ್ಚುಗೆ ಗಳಿಸಿದೆ. ಜುಲೈ 5 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದ್ದು, ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ನಟರಾಜ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ ತೆರೆಕಾಣಲಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ರಮೇಶ್ ರೈ ಕುಕ್ಕುವಳ್ಳಿ ಮಾತನಾಡಿ ’ಈ ನಾಡಿನ ರೈತಾಪಿ ಜನರು ತಮ್ಮ ಬೇಸಾಯ- ಕೃಷಿ, ತೋಟಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ತುಳುನಾಡಿನ ದೈವ ದೇವರು, ನೇಮ, ಕೋಲ, ತಂಬಿಲ, ನಾಗಾರಾಧನೆ, ದೈವಾರಾಧನೆ ಮೂಲಕ ಈ ಮಣ್ಣಿನ, ಬದುಕಿನ ಕಥೆಯನ್ನು ಕಟ್ಟಿಕೊಡುವ ತುಳು ಚಲನಚಿತ್ರ “ಧರ್ಮ ದೈವ” ಬೆಳ್ಳಿ ತೆರೆಯಲ್ಲಿ ಮೂಡಿಬರಲು ಸಿದ್ಧವಾಗಿದೆ. ತುಳುವರು ಸಿನಿಮಾ ನೋಡಿ ಕಲಾವಿದರನ್ನು ಬೆಳೆಸಿ” ಎಂದರು.

ನಟ ಚೇತನ್ ರೈ ಮಾಣಿ ಮಾತನಾಡಿ, “ಇಂದು ನಮ್ಮ ಯುವ ಜನಾಂಗ ತಮ್ಮ ಹಿರಿಯರು ಬಾಳಿ ಬೆಳಗಿದ ರೀತಿ- ನೀತಿ, ನಂಬಿಕೆ- ಸಂಸ್ಕೃತಿ, ನಡವಳಿಕೆಗಳಿಗೆ ಪ್ರಾಧಾನ್ಯತೆ ಕೊಟ್ಟು ಚಿತ್ರ ಕಥೆಗಳನ್ನು ನಿರ್ಮಿಸುವ ಮೂಲಕ ಹಿರಿಯರ, ಸಂಘ ಸಂಸ್ಥೆಗಳ ಅಭಿಮಾನಕ್ಕೂ ಪಾತ್ರರಾಗಿರುವರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದ ವಿಶೇಷವಾಗಿ ಉಡುಪಿ, ಮಂಗಳೂರು ಮತ್ತು ಪುತ್ತೂರಿನ ಯುವಕರು ತಾವೇ ಸೇರಿಕೊಂಡು ಧರ್ಮದೈವ ಪ್ರೊಡಕ್ಷನ್ಸ್ ಲಾಂಛನದಲ್ಲಿ “ಧರ್ಮ ದೈವ”ಎಂಬ ಹೆಸರಿನಲ್ಲಿ ಒಂದು ಪೂರ್ಣ ಚಲನಚಿತ್ರವನ್ನು ನಿರ್ಮಾಣ ಮಾಡಿ ಸೆನ್ಸಾರ್ ಮಂಡಳಿಯಿಂದ ಮಾನ್ಯತೆ ಪಡೆದು ಜುಲೈ 5 ರಂದು ಬೆಳ್ಳಿತೆರೆಯಲ್ಲಿ ಮೂಡಿಬರಲಿದೆ. ಯುವ ನಿರ್ಮಾಪಕ ಬಿಳಿಯೂರು ರಾಕೇಶ್ ಭೋಜರಾಜ ಶೆಟ್ಟಿ, “ಧರ್ಮದೈವ” ತುಳು ಚಲನ ಚಿತ್ರವನ್ನು ಭಕ್ತಿ, ಶಕ್ತಿ ಶ್ರದ್ಧೆಯಿಂದ ನಿರ್ಮಾಣ ಮಾಡಿಕೊಟ್ಟಿರುವರು. ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ಕಥೆ ಬರೆದು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರದ ಚಿತ್ರೀಕರಣ ಬಹುತೇಕ ಕೇರಳ ಗಡಿಭಾಗದಲ್ಲಿರುವ ಕರ್ನೂರು ಮತ್ತು ಸುಳ್ಯ, ಪುತ್ತೂರು ತಾಲೂಕಿನ ಸುತ್ತಮುತ್ತ ಸುಮಾರು 25 ದಿನ ನಡೆದಿದೆ” ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ಬಿಳಿಯೂರು ರಾಕೇಶ್ ಭೋಜರಾಜ ಶೆಟ್ಟಿ, ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ, ರಮೇಶ್ ರೈ ಕುಕ್ಕುವಳ್ಳಿ, ಚೇತನ್ ರೈ ಮಾಣಿ, ಅರುಣ್ ರೈ ಪುತ್ತೂರು ಮತ್ತಿತರರು ಉಪಸ್ಥಿತರಿದ್ದರು. ನವರಸ ಭರಿತವಾಗಿರುವ “ಧರ್ಮದೈವ” ತುಳು ಚಲನಚಿತ್ರದ ತಾರಾಗಣದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ದೀಪಕ್ ರೈ ಪಾಣಾಜೆ, ಚೇತನ್ ರೈ ಮಾಣಿ, ರೂಪಶ್ರೀ ವರ್ಕಾಡಿ, ದಯಾನಂದ ರೈ ಬೆಟ್ಟಂಪಾಡಿ, ಭರತ್ ಶೆಟ್ಟಿ, ರವಿ ಸಾಲ್ಯಾನ್ (ಸ್ನೇಹಿತ್), ಸಂದೀಪ್ ಪೂಜಾರಿ, ಪುಷ್ಪರಾಜ್ ಬೊಳ್ಳಾರ್, ರಂಜನ್ ಬೋಳಾರ್, ಕೌಶಿಕ್ ರೈ ಕುಂಜಾಡಿ, ದೀಕ್ಷಾ ಡಿ.ರೈ, ಹಾಗೂ ಗ್ರೇಷಿಯಲ್ ಕಲಿಯಂಡ ಕೊಡಗು ಮೊದಲಾದವರು ಅಭಿನಯಿಸಿದ್ದಾರೆ.

- Advertisement -

Related news

error: Content is protected !!