Monday, May 20, 2024
spot_imgspot_img
spot_imgspot_img

ಪುತ್ತೂರು : ಎಸ್‌ಡಿಪಿಐ ಬನ್ನೂರು ವತಿಯಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ

- Advertisement -G L Acharya panikkar
- Advertisement -

ಪುತ್ತೂರು :ಜುಲೈ 23:- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವತಿಯಿಂದ ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮವು ಇಂದು ಜರುಗಿತು.

ಬನ್ನೂರು ಜುಮಾ ಮಸ್ಜಿದ್ ಧರ್ಮ ಗುರುಗಳು ಭಕ್ತಿ ತುಂಬಿದ ಪ್ರಾರ್ಥನೆಯೊಂದಿಗೆ ಚಾಲನೆ ನೀಡಿದರು. ಎಸ್‌ಡಿಪಿಐ ಬನ್ನೂರು ವಾರ್ಡ್ ಸಮಿತಿ ಅಧ್ಯಕ್ಷರಾದ ಮೊಹಮ್ಮದ್ ಹುಸೇನ್ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಉದ್ಘಾಟಿಸಿದರು. ಪುತ್ತೂರು ನಗರ ಸಭಾ ಸದಸ್ಯೆ ಕೆ. ಫಾತಿಮತ್ ಝೂರಾ ಮನೆಯ ಯಜಮಾನಿ ಜಮೀಲಾ ಅವರಿಗೆ ಕೀ ಹಸ್ತಾಂತರಿಸಿದರು.

ಮನೆಯ ಕೆಲಸ ಕಾರ್ಯಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡ ಬನ್ನೂರು ವಾರ್ಡ್ ಸಮಿತಿ ಅಧ್ಯಕ್ಷ ಮೊಹಮ್ಮದ್ ಹುಸೇನ್, ಕಾರ್ಯದರ್ಶಿ ಮುಸ್ತಫ, ಮುಸ್ಲಿಂ ಯೂಥ್ ಫೆಡರೇಷನ್ ಅಧ್ಯಕ್ಷ ಅಝರ್ ಬನ್ನೂರು ಹಾಗೂ ಸ್ಥಳೀಯ ಸಂಸ್ಥೆಗಳಾದ ಮುಸ್ಲಿಂ ಯೂಥ್ ಫೆಡರೇಷನ್ ಬನ್ನೂರು ಪರವಾಗಿ ಗೌರವ ಅಧ್ಯಕ್ಷ ರಫೀಕ್ ಬಾಂಬೆ , ಸುಲ್ತಾನ್ ಗೈಸ್ ಪರವಾಗಿ ಹನೀಫ್ , ವಾರ್ಡ್ ಸಂಖ್ಯೆ 05 ಬೂತ್ ಸಮಿತಿ ಪರವಾಗಿ ರಸೀಕ್ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷ ಹಮೀದ್ ಸಾಲ್ಮರ, ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಸದಸ್ಯರಾದ ಪಿಬಿಕೆ ಮುಹಮ್ಮದ್, ಬದ್ರಿಯಾ ಜುಮಾ ಮಸ್ಜಿದ್ ಬನ್ನೂರು ಕಾರ್ಯದರ್ಶಿ ಅಶ್ರಫ್ ಹಾರಾಡಿ, ಮುಸ್ಲಿಂ ಯೂಥ್ ಫೆಡರೇಷನ್ ಬನ್ನೂರು ಗೌರವ ಅಧ್ಯಕ್ಷ ರಫೀಕ್ ಬಾಂಬೆ, ಅಧ್ಯಕ್ಷ ಅಝರ್, ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಪುತ್ತೂರು ಅಧ್ಯಕ್ಷ ಬಾತೀಶ ಬಡಕ್ಕೂಡಿ, ಮುಸ್ಲಿಂ ಯೂಥ್ ಫೆಡರೇಷನ್ ಬನ್ನೂರು ಕಾರ್ಯದರ್ಶಿ ಸೈಫುದ್ದೀನ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಇಫಾಝ್ ಬನ್ನೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!