Saturday, June 28, 2025
spot_imgspot_img
spot_imgspot_img

ಜೂ.23ರಂದು ದ.ಕ.ಜಿಲ್ಲಾದ್ಯಂತ ಬಿಜೆಪಿ ಪ್ರತಿಭಟನೆ

- Advertisement -
- Advertisement -

ಮಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಮರೀಚಿಕೆಯಾಗಿದೆ. ಜನರ ಮೂಲಭೂತ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಇದನ್ನು ಖಂಡಿಸಿ ಜೂ.23ರಂದು ಬೆಳಗ್ಗೆ 10ಕ್ಕೆ ದ.ಕ. ಜಿಲ್ಲೆಯ ಎಲ್ಲಾ ಗ್ರಾಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಂದೆ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು.

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಏಕನಿವೇಶನ ಮಂಜೂರಾತಿಯ 9/11 ಸಮಸ್ಯೆ ಬಗೆಹರಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. 9/11ಗೆ ಸಂಬಂಧಿಸಿ ಮುಡಾದಲ್ಲಿ 620 ಅರ್ಜಿ, ಪುಡಾದಲ್ಲಿ 120 ಅರ್ಜಿಯು ಕಳೆದ ಮೂರು ತಿಂಗಳಿನಿಂದ ಬಾಕಿ ಇದೆ. ಜಿಲ್ಲೆಯಲ್ಲಿ ವೃದ್ಧಾಪ್ಯ ವೇತನ, ವಿಧವಾ ವೇತನ ಸಹಿತ ಸರಕಾರದ ವಿವಿಧ ಪಿಂಚಣಿ ಯೋಜನೆಗಳ 42,184 ಫಲಾನುಭವಿಗಳಿಗೆ ಯೋಜನೆ ಪುನರ್‌ಪರಿಶೀಲನೆಗೆ ನೋಟಿಸ್ ನೀಡಲಾಗಿದೆ. ಅರ್ಹರಿಗೆ ಆರು ತಿಂಗಳಿನಿಂದ ಪಿಂಚಣಿ ಸೌಲಭ್ಯ ಸಿಗುತ್ತಿಲ್ಲ ಎಂದು ಆರೋಪಿಸಿದರು.

- Advertisement -

Related news

error: Content is protected !!