Monday, June 30, 2025
spot_imgspot_img
spot_imgspot_img

ವಕ್ಫ್ ಬೋರ್ಡ್ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ..!

- Advertisement -
- Advertisement -

ವಕ್ಸ್ ಮಂಡಳಿ ಒತ್ತುವರಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಇಂದು ಪ್ರತಿಭಟನೆಗಿಳಿದಿದ್ದಾರೆ. ಹಾವೇರಿಯಲ್ಲಿ ವಕ್ಸ್ ಮಂಡಳಿ ಒತ್ತುವರಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಲಬುರಗಿಯಲ್ಲಿ ವಕ್ಸ್ ಬೋರ್ಡ್ ಅತಿಕ್ರಮಣ ವಿರೋಧಿಸಿ ಧರಣಿ ನಿರತರು, ರೈತರು, ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗೆ ಸಾಥ್ ನೀಡಿರುವ ರಾಜ್ಯ ಬಿಜೆಪಿಯು ರಾಜ್ಯದಲ್ಲಿ ಭ್ರಷ್ಟ ಸಿದ್ದರಾಮಯ್ಯ ಸರ್ಕಾರದ ಕುತಂತ್ರದ ಬೆಂಬಲದಿಂದ ದಿನೇ ದಿನೆ ಹದು ಮೀರುತ್ತಿರುವ ವಕ್ಸ್ ಬೋರ್ಡ್ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ಮಾಡುತ್ತಿದೆ. ಇಂದು ಮತ್ತು ನಾಳೆ ರಾಜ್ಯಾದ್ಯಂತ ಬಿಜೆಪಿಯ ನಾಯಕರು, ಕಾರ್ಯಕರ್ತರು, ರೈತರು, ದಲಿತರು, ಆಸ್ತಿಪಾಸ್ತಿ ಕಳೆದುಕೊಂಡವರು ಒಟ್ಟಾಗಿ ಲೂಟಿಕೋರ ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಲಾಗುತ್ತಿದೆ ಎಂದು ಹೇಳಿದೆ.

ಬಿಜೆಪಿಯ ಹೋರಾಟಕ್ಕೆ ನಾಡಿನ ಜನಸಾಮಾನ್ಯರು ಕೈ ಜೋಡಿಸುವ ಮೂಲಕ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಿ, ವಕ್ಸ್‌ಗೆ ಕಡಿವಾಣ ಹಾಕಿಸಬೇಕಿದೆ ಎಂದು ಕರೆ ನೀಡಿದೆ. ಪ್ರತಿಭಟನೆ ವೇಳೆ ಮಾತನಾಡಿದ ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರೈತರ ಭೂಮಿಯನ್ನು ಕಸಿದುಕೊಳ್ಳಲಾಗುತ್ತಿದೆ. ಇಂದು ಕಲಬುರಗಿಯಲ್ಲಿ ಈ ಪ್ರತಿಭಟನೆ ನಡೆಸಲಾಗುತ್ತಿದೆ. ನಾವು ಸಚಿವ ಜಮೀರ್ ಅಹಮದ್ ಖಾನ್ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ವಕ್ಸ್ ಬೋರ್ಡ್ ಅನ್ನು ಸರ್ಕಾರಿ ದಾಖಲೆಗಳಿಂದ ತೆಗೆದುಹಾಕಬೇಕು. ಇದನ್ನು ಆಗ್ರಹಿಸಿ ನಮ್ಮ ಬಿಜೆಪಿ ನಾಯಕರು ನವೆಂಬರ್ 21, 22, 23ರಂದು ಮೂರು ದಿನಗಳ ಕಾಲ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಜಮೀನನ್ನೆಲ್ಲ ವಕ್ಸ್ ಬೋರ್ಡ್ ವಶಪಡಿಸಿಕೊಳ್ಳುತ್ತಿರುವ ಕಾರಣಕ್ಕೆ ಅದನ್ನು ಸರ್ಕಾರಿ ದಾಖಲೆಗಳಿಂದಲೇ ತೆಗೆದುಹಾಕಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ವಕ್ಸ್ ಮಂಡಳಿ ಮೂಲಕ ರೈತರ ಆಸ್ತಿ ಕಬಳಿಸುತ್ತಿದೆ ಎಂದು ಆರೋಪಿಸಿ ಹಾವೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ನಮ್ಮ ಭೂಮಿ ನಮ್ಮ ಹಕ್ಕು ಘೋಷವಾಕ್ಯದಡಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಕ್ಸ್ ಬೋರ್ಡ್ ನೀಡಿರುವ ನೋಟಿಸ್‌‌ಗಳನ್ನು ತಕ್ಷಣವೇ ವಾಪಸ್ ಪಡೆಯಬೇಕು. ರೈತರು ಹಾಗೂ ಇತರರ ಆಸ್ತಿಯ ಪಹಣಿಯಲ್ಲಿ ದಾಖಲಿಸಿರುವ ವಕ್ಸ್ ಹೆಸರನ್ನು ಕೂಡಲೇ ತೆಗೆಯಬೇಕು ಎಂದು ಪಟ್ಟು ಹಿಡಿದರು.

ವಕ್ಸ್ ಬೋರ್ಡ್ ನೋಟಿಸ್ ಖಂಡಿಸಿ ನೇಗಿಲ ಯೋಗಿ ಸ್ವಾಭಿಮಾನಿ ವೇದಿಕೆ ವತಿಯಿಂದ ವಕ್ಸ್ ಹಠಾವೊ, ಅನ್ನದಾತ ಬಚಾವೊ ಎನ್ನುವ ಬೃಹತ್ ಪ್ರತಿಭಟನಾ ಮೆರವಣಿಗೆ ಇಂದು ಹಾವೇರಿಯಲ್ಲಿ ನಡೆಯಿತು. ನೂರಾರು ಮಠಾಧೀಶರು ರೈತ ಮುಖಂಡರು, ರೈತರು, ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಾಗಿ ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಖಾನ್, ವಕ್ಸ್ ಬೋರ್ಡ್ ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶ ಹೊರಹಾಕಿದರು. ಪ್ರಮುಖ ಮಠಗಳ ಮಠಾಧೀಶರು ಈ ಪ್ರತಿಭಟನೆಗೆ ಸಾಥ್ ನೀಡಿದರು.

- Advertisement -

Related news

error: Content is protected !!