ಭಾರತದ ಚುನಾವಣಾ ಆಯೋಗವು ಲೋಕ ಸಭೆ ಚುನಾವಣೆಗೆ ಸಂಬಂಧಿಸಿದಂತೆ ಸುತ್ತೋಲೆಯನ್ನು ಹೊರಡಿಸಿದ್ದು, ಏಪ್ರಿಲ್ 16ರಂದು ಲೋಕಸಭೆ ಚುನಾವಣೆ ನಡೆಸಲಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಸ್ವತಃ ಮುಖ್ಯ ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದೆ. ಈ ಸುತ್ತೋಲೆಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳ ಕರ್ತವ್ಯ ಪಾಲನೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಪ್ರಕಟಿಸಲಾಗಿದೆ ಎಂದು ಹೇಳಿದೆ.
ಏಪ್ರಿಲ್ 16ರಿಂದ ಲೋಕಸಭೆ ಚುನಾವಣೆಯ ಪ್ರಕ್ರಿಯೆಗಳು ಆರಂಭವಾಗಲಿದೆ. ಈ ಕಾರಣಕ್ಕೆ ದೆಹಲಿಯ 11 ಜಿಲ್ಲಾಗಳಲ್ಲಿರುವ ಚುನಾವಣಾ ಅಧಿಕಾರಿಗಳಿಗೆ ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಆದೇಶವನ್ನು ಹೊರಡಿಸಲಾಗಿದೆ ಎಂದು ಚುನಾವಣಾ ಆಯೋಗ ಎಕ್ಸ್ನಲ್ಲಿ ತಿಳಿಸಿದೆ.
ಚುನಾವಣಾ ಆಯೋಗ ಹೊರಡಿಸಿದ ಸುತ್ತೋಲೆ ಬಗ್ಗೆ ಮಾಧ್ಯಮಗಳು ಆಯೋಗವನ್ನು ಪ್ರಶ್ನಿಸಿತ್ತು. ಇದೀಗ ಈ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟಿಕರಣ ನೀಡಿದೆ. ಚುನಾವಣೆಗೆ ತಯಾರಿ ನಡೆಸಲು ಹಾಗೂ ಎಲ್ಲ ಅಧಿಕಾರಿಗಳು ಚುನಾವಣಾ ಕಾರ್ಯಯೋಜನೆಯನ್ನು ರೂಪಿಸಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದೆ.