- Advertisement -
- Advertisement -
ಮಂಗಳೂರು: 5 ವರ್ಷದ ಒಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಇಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಮಂಗಳೂರಿನ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ದಕ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರ ಪುಟ್ಟ ಮಗಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅನೇಕ ಕಂದಮ್ಮಗಳಿಗೆ ಶಾಸಕ ಡಾ.ಭರತ್ ಶೆಟ್ಟಿಯವರು ಪೋಲಿಯೋ ಹನಿ ಹಾಕುವ ಮೂಲಕ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
- Advertisement -