Thursday, May 16, 2024
spot_imgspot_img
spot_imgspot_img

ವಿಟ್ಲ: ಕಾಲುಸಂಕ ದಾಟುತ್ತಿದ್ದ ವ್ಯಕ್ತಿ ಕಣಿಗೆ ಬಿದ್ದು ಮೃತ್ಯು

- Advertisement -G L Acharya panikkar
- Advertisement -

ವಿಟ್ಲ: ವ್ಯಕ್ತಿಯೊಬ್ಬರು ಕಾಲು ಸಂಕ ದಾಟುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕಣಿಗೆ ಬಿದ್ದು ಮೃತಪಟ್ಟ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ. ಪುಣಚ ಗ್ರಾಮದ ಮಾಯಿಲಮೂಲೆ ನಿವಾಸಿ ಕೇಶವ ನಾಯ್ಕ ಎಂ.(51) ಮೃತಪಟ್ಟವರು.

ಕೇಶವ ನಾಯ್ಕ ಅವರು ಕಳೆದ ರಾತ್ರಿ ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿರುವ ತನ್ನ ಬಾಡಿಗೆ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಮನೆಯ ಬಳಿಯಿರುವ ನೀರು ಹರಿಯುವ ಸಾರ್ವಜನಿಕ ಕಣಿಗೆ ಹಾಕಿರುವ ಕಾಲುಸಂಕವನ್ನು ದಾಟುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ರಿ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಯು.ಡಿ ಆರ್ ನಂಬ್ರ : 33/2023 ಕಲಂ: 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!