Saturday, May 18, 2024
spot_imgspot_img
spot_imgspot_img

ಪುಂಜಾಲಕಟ್ಟೆ: ದ್ವಿಚಕ್ರ ವಾಹನ ಅಪಘಾತದಿಂದ ರಂಗಭೂಮಿ ಕಲಾವಿದ ಮೃತ್ಯು

- Advertisement -G L Acharya panikkar
- Advertisement -

ಪುಂಜಾಲಕಟ್ಟೆ: ದ್ವಿಚಕ್ರ ವಾಹನ ಅಪಘಾತದಲ್ಲಿ ರಂಗಭೂಮಿ ಕಲಾವಿದರೋರ್ವರು ಮೃತಪಟ್ಟ ಘಟನೆ ನಡೆದಿದೆ.

ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರಾಯಿದೊಟ್ಟು, ನೂಜೆ ದಿ.ಬೇಬಿ ಅವರ ಪುತ್ರ ಗೌತಮ್ (26) ಮೃತಪಟ್ಟರಾಗಿದ್ದಾರೆ.

ಮೂಡುಬಿದಿರೆ ಪಿಂಗಾರ ಕಲಾವಿದೆರ್ ತಂಡದ ಕಲಾವಿದರಾಗಿದ್ದ ಅವರು ಡಿ.30 ರಂದು ಬೆಳುವಾಯಿಯಲ್ಲಿ ನಾಟಕ ಮುಗಿಸಿ ತಡರಾತ್ರಿ ಸುಮಾರು 3ಗಂಟೆಯ ಹೊತ್ತಿಗೆ ಮನೆಗೆ ಹಿಂತಿರುಗುತ್ತಿರುವಾಗ ಅವರ ಸ್ಕೂಟರ್ ಮನೆಯ ಸಮೀಪ ಮರವೊಂದಕ್ಕೆ ಢಿಕ್ಕಿಯಾಗಿ ಗೌತಮ್ ಅವರ ತಲೆಗೆ ಏಟಾಗಿ ರಸ್ತೆಗೆ ಬಿದ್ದಿದ್ದರು. ಬೆಳಗ್ಗೆಯಷ್ಟೆ ಘಟನೆ ಬೆಳಕಿಗೆ ಬಂದಿದ್ದು, ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಅವಿವಾಹಿತರಾಗಿದ್ದ ಅವರು ಬಿ.ಸಿ.ರೋಡ್ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಮೃತರು ತಾಯಿ ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಉತ್ತಮ ನಾಟಕ ಕಲಾವಿದರಾಗಿದ್ದ ಅವರು ಹಲವಾರು ಸಂಘ ಸಂಸ್ಥೆಗಳ ನಾಟಕಗಳಲ್ಲಿ ಪಾತ್ರ ವಹಿಸಿದ್ದರು.

- Advertisement -

Related news

error: Content is protected !!