Friday, June 27, 2025
spot_imgspot_img
spot_imgspot_img

ಪುಂಜಾಲಕಟ್ಟೆ: ಬೆಂಗಳೂರಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ; ಪತ್ನಿಯಿಂದ ದೂರು ದಾಖಲು

- Advertisement -
- Advertisement -

ಪುಂಜಾಲಕಟ್ಟೆ: ತರಬೇತಿಯ ಮಕ್ಕಳನ್ನು ಎಕ್ಸಾಮ್ ಗೆ ಬೆಂಗಳೂರಿಗೆ ಕರೆದುಕೊಂಡು ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದ ವ್ಯಕ್ತಿ ವಾಪಾಸ್ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಕೊಲ್ಪದಬೈಲ್ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆಯಾದ ಯುವಕ.

ಅನಿಲ್ ಪ್ರವೀಣ ಪಿರೇರಾ ಅವರ ಪತ್ನಿ ಲವಿಟ ಡಿʼಸೋಜ ಅವರು ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಅನಿಲ್ ಪ್ರವೀಣ ಪಿರೇರಾ ಅವರು ವಿನ್ ನ್ಯಾಷನಲ್ ಸ್ಪೇಲ್ ಬಿ ತರಬೇತಿಯ regional coordinator ಆಗಿ ಕೆಲಸ ನಿರ್ವಹಿಸುತ್ತಿದ್ದು, ಸೆ.02 ರಂದು ಸಂಜೆ 8.30 ಕ್ಕೆ ವಿನ್ ನ್ಯಾಷನಲ್ ಸ್ಪೇಲ್ ಬಿ ತರಬೇತಿಯ 5 ಜನ ಮಕ್ಕಳನ್ನು ಬೆಂಗಳೂರಿನಲ್ಲಿ ನಡೆಯುವ ಎಕ್ಸಾಮ್ ಗೆ ಕರೆದುಕೊಂಡು ಹೋಗಿ ಬರುವುದಾಗಿ ಹೇಳಿ ತೆರಳಿದ್ದಾರೆ.

ಬಳಿಕ ಸೆ.3 ರಂದು ರಾತ್ರಿ 8.45 ಕ್ಕೆ ಕರೆ ಮಾಡಿ ವಿಚಾರಿಸಿದಾಗ ರಾತ್ರಿ 9 ಗಂಟೆಗೆ ಬೆಂಗಳೂರಿನಿಂದ ಮಂಗಳೂರಿಗೆ ಬಸ್ ಇದ್ದು, ಇನ್ನು ಹೊರಡಬೇಕಷ್ಟೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಇನ್ನು ಅನಿಲ್ ಅವರಿಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಬಳಿಕ ಸಂಜೆಯಾದರೂ ಮನೆಗೆ ಮರಳಿ ಬಾರದೆ ಇರುವುದನ್ನು ಕಂಡು ಸಂಬಂಧಿಕರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಿದಾಗ ಅನಿಲ್ ಅವರು ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!