ಪುಂಜಾಲಕಟ್ಟೆ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ವಾಮದ ಪದವಿನಲ್ಲಿ ನಡೆದಿದೆ.
ವಾಮದಪದವು ಸಮೀಪದ ಕುಕ್ಕಿಪ್ಪಾಡಿ ಎಂಬಲ್ಲಿನ ಗಂಗಾಧರ ಎಂಬವರ ಪತ್ನಿ ಜಯಂತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮದುವೆ ಆಗಿ ಸುಮಾರು ಆರು ವರ್ಷಗಳಾಗಿದ್ದು ಗಂಡ ಹೆಂಡತಿ ಅನ್ಯೋನ್ಯತೆಯಿದ್ದರು.
ಆದರೆ ಆರು ವರ್ಷಗಳಾದರೂ ಮಕ್ಕಳಾಗಿಲ್ಲ ಎಂಬ ಕೊರಗಿನಿಂದ ಇದ್ದ ಇವರು ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. . ಈ ಬಗ್ಗೆ ಪುಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುಂಜಾಲಕಟ್ಟೆ: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಾಮದಪದವು ಎಂಬಲ್ಲಿ ನಡೆದಿದೆ.
ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕೌಡೋಡಿ ನಿವಾಸಿ ಕರಿಯ ಎಂಬವರ ಮಗ ಲೋಕೇಶ್ ಆತ್ಮಹತ್ಯೆ ಮಾಡಿಕೊಂಡ ಯುವಕ.
ಕೂಲಿ ಕೆಲಸ ಮಾಡುತ್ತಿದ್ದು ಮದ್ಯ ಸೇವನೆ ಅಭ್ಯಾಸ ಹೊಂದಿದ್ದ ಲೋಕೇಶ್ ನಿನ್ನೆ ರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪುಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.