


ಪುರಿ ಜಗನ್ನಾಥ ದೇಗುಲದ ಬಳಿ ಇಂದು ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಮೃತಪಟ್ಟು, ಸುಮಾರು 50 ಜನರು ಗಾಯಗೊಂಡಿದ್ದಾರೆ.
ಈ ಘಟನೆ ಬೆನ್ನಲ್ಲೇ ಜಿಲ್ಲಾಧಿಕಾರಿ ಸಿದ್ದಾರ್ಥ್ ಶಂಕರ್ ಸ್ಟೈನ್ ಮತ್ತು ಎಸ್ಪಿ ವಿನೀತ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಿ ಸಿಎಂ ಮೋಹನ್ ಮಾಝಿ ಆದೇಶ ಹೊರಡಿಸಿದ್ದಾರೆ.ನಿರ್ಲಕ್ಷ್ಯದಿಂದ ಕಾಲ್ತುಳಿತ ಸಂಭವಿಸಿದ್ದು, ಇದು ಅಕ್ಷಮ್ಯ. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ವಿಷ್ಣು ಪಾಟಿ ಮತ್ತು ಕಮಾಂಡೆಂಟ್ ಅಜಯ್ ಪಧಿ ಎಂಬ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಾಗಿ ಸಿಎಂ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಖುರ್ದಾ ಜಿಲ್ಲಾಧಿಕಾರಿ ಚಂಚಲ್ ರಾಣಾ ಅವರನ್ನು ಪುರಿಯ ನೂತನ ಜಿಲ್ಲಾಧಿಕಾರಿಯಾಗಿ ಸಿಎಂ ನೇಮಿಸಿದ್ದಾರೆ. ಅಗರ್ವಾಲ್ ಅವರ ಬದಲಿಗೆ ಪಿನಕ್ ಮಿಶ್ರಾ ಅವರನ್ನು ಪುರಿ ಎಸ್ಪಿಯಾಗಿ ನೇಮಿಸಲಾಗಿದೆ. ಇನ್ನು ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಸರ್ಕಾರ ತಲಾ 25 ಲಕ್ಷ ರೂ. ಆರ್ಥಿಕ ನೆರವು ನೀಡಲಿದೆ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಗುಂಡಿಚಾ ದೇವಸ್ಥಾನದ ಬಳಿ ಬೆಳಿಗಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಸಾವನ್ನಪ್ಪಿ, ಸುಮಾರು 50 ಜನರು ಗಾಯಗೊಂಡಿದ್ದರು