Wednesday, April 24, 2024
spot_imgspot_img
spot_imgspot_img

ಪುತ್ತೂರು: ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಸಚಿವ ರೇವಣ್ಣ ವಿರುದ್ದ ದೂರು ದಾಖಲು!!

- Advertisement -G L Acharya panikkar
- Advertisement -

ಪುತ್ತೂರು: ಮಾಜಿ ಸಚಿವ , ಜೆಡಿಎಸ್ ನ ಹಿರಿಯ ನಾಯಕ ಎಚ್.ಡಿ ರೇವಣ್ಣ ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದರ ವಿರುದ್ಧ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹಾಸನ‌ ಜಿಲ್ಲೆಯಲ್ಲಿ ಇತ್ತೀಚೆಗೆ ರೇವಣ್ಣ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ” ಖಾಸಗಿ ನರ್ಸಿಂಗ್ ಹೋಂಗಳು ಕೋವಿಡ್ ಸಾಂಕ್ರಾಮಿಕ ರೋಗದ ಕಷ್ಟದ ಸಮಯದಲ್ಲಿಯೂ ದಂಧೆ ನಡೆಯುತ್ತಿದ್ದು, ಸುಲಿಗೆ ನಿಲ್ಲಿಸದಿದ್ದರೆ ಸಾರ್ವಜನಿಕರನ್ನು ಪ್ರಚೋದಿಸುತ್ತೇವೆ ಹಾಗೂ ಜನರಿಗೆ ಹೇಳಿ ಹೊಡೆಸುತ್ತೇನೆ. ಈ ಆಸ್ಪತ್ರೆಗಳ ವಿರುದ್ಧ ಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿದೆ. ಇಲ್ಲದಿದ್ದರೆ, ನಾನು ಸುಮ್ಮನಿರುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯ ಆಧಾರದ ಮೇಲೆ ನರ್ಸಿಂಗ್ ಹೋಮ್ ಗಳ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್​ ಸದಸ್ಯ ಡಾ.ಗಣೇಶ್ ಪ್ರಸಾದ್ ಮುದ್ರಾಜೆ ಅವರು ಪುತ್ತೂರು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

Related news

error: Content is protected !!