Tuesday, July 21, 2026
spot_imgspot_img
spot_imgspot_img

ಪುತ್ತೂರು: ಪುರುಷರಕಟ್ಟೆ ಪ್ರಕರಣ-ಯುವತಿ ಸೇರಿದಂತೆ ಆರು ಮಂದಿಗೆ ಜಾಮೀನು

- Advertisement -
- Advertisement -

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಯುವಕರು ದಾಖಲಿಸಿದ್ದ ಪ್ರತಿ ದೂರಿನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದ್ದ ಯುವತಿ ಸೇರಿದಂತೆ ಆರು ಮಂದಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಯುವತಿಯೊಬ್ಬರು, ಯುವಕನೊಬ್ಬ ಚಾಕು ಹಿಡಿದು ತಂಡದೊಂದಿಗೆ ವಾಹನದಲ್ಲಿ ಬಂದು ತಮ್ಮನ್ನು ಹಿಂಬಾಲಿಸಿ ದಾಳಿ ಮಾಡಲು ಯತ್ನಿಸಿದ್ದಾನೆ ಎಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದಕ್ಕೆ ಪ್ರತಿಯಾಗಿ ಯುವಕರ ತಂಡ ಮತ್ತೊಂದು ದೂರು ದಾಖಲಿಸಿ, ಪ್ರಕರಣದ ನೈಜ ಸಂಗತಿಗಳು ತಿಳಿದಿದ್ದರೂ ಧಾರ್ಮಿಕ ದ್ವೇಷದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಸುಳ್ಳು ದೂರು ದಾಖಲಿಸಲಾಗಿದೆ ಎಂದು ಆರೋಪಿಸಿತ್ತು. ತಮ್ಮ ದೂರಿನಲ್ಲಿ ಹಿಂದೂ ಸಂಘಟನೆಯ ಮುಖಂಡ ಮುರಳಿಕೃಷ್ಣ ಹಸಂತಡ್ಕ ಸೇರಿದಂತೆ ಇತರರ ವಿರುದ್ಧವೂ ಆರೋಪ ಮಾಡಲಾಗಿತ್ತು.

ಯುವಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ವೀಕ್ಷಾ ವಿ.ಎಸ್., ಆಕೆಯ ತಂದೆ ಸಾಂತಪ್ಪ ಗೌಡ, ಮುರಳಿಕೃಷ್ಣ ಹಸಂತಡ್ಕ, ಪುರುಷೋತ್ತಮ ಗೌಡ ಮುಂಗ್ಲಿಮನೆ, ಜಯರಾಮ ಡಿ. ಹಾಗೂ ಆನಂದ ಗೌಡ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರು ನ್ಯಾಯಾಲಯವು ಎಲ್ಲಾ ಆರು ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ನ್ಯಾಯವಾದಿಗಳಾದ ಮಾಧವ ಪೂಜಾರಿ ಹಾಗೂ ರಾಕೇಶ್ ಬಲ್ನಾಡು ವಾದ ಮಂಡಿಸಿದರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!