Friday, July 10, 2026
spot_imgspot_img
spot_imgspot_img

2017ರ ಪುತ್ತೂರು ದರೋಡೆ ಪ್ರಕರಣ: 41 ಬಾರಿ ದಸ್ತಗಿರಿ ವಾರೆಂಟ್ ಅದೇಶವಾಗಿದ್ದ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು: 2017ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

2017ರ ಡಿಸೆಂಬರ್ 22ರಂದು ಮೂವರು ಅಪರಿಚಿತರು ಮನೆಯೊಂದಕ್ಕೆ ನುಗ್ಗಿ ಪಿಸ್ತೂಲ್ ಹಾಗೂ ಚೂರಿ ತೋರಿಸಿ ಮನೆಯವರನ್ನು ಬೆದರಿಸಿ ಸುಮಾರು ₹2,88,000 ಅಂದಾಜು ಮೌಲ್ಯದ ಚಿನ್ನಾಭರಣ ಹಾಗೂ ₹60,0000 ನಗದು ದರೋಡೆ ಮಾಡಿದ್ದರು. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 200/2017ರಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿ ಕೇರಳದ ತ್ರಿಶೂರ್ ನಿವಾಸಿ ನೆಲ್ಸನ್ ಸಿ.ವಿ. (38) 2021ರ ಆಗಸ್ಟ್ 27ರಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಇದುವರೆಗೆ 41 ಬಾರಿ ಬಂಧನ ವಾರಂಟ್ ಜಾರಿಯಾಗಿತ್ತು.

ಜುಲೈ 8ರಂದು ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸಂತೋಷ್ ಎ., ಪೊಲೀಸ್ ಕಾನ್‌ಸ್ಟೇಬಲ್‌ಗಳಾದ ವಿನಾಯಕ ಹಾಗೂ ಶಿವರಾಜ್ ಅವರ ತಂಡ ಕೇರಳದ ತ್ರಿಶೂರ್ ಜಿಲ್ಲೆಯ ಮಿಯೂರಿನಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿತು.

ಇದೇ ವೇಳೆ, ಆರೋಪಿ ಈ ಹಿಂದೆ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಜಾಮೀನು ಷರತ್ತುಗಳನ್ನು ಪದೇ ಪದೇ ಉಲ್ಲಂಘಿಸಿದ್ದರಿಂದ, ಆತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 80/2026ರಡಿ ಬಿಎನ್‌ಎಸ್-2023ರ ಕಲಂ 269ರಂತೆ ಮತ್ತೊಂದು ಪ್ರಕರಣವೂ ದಾಖಲಾಗಿದೆ.

- Advertisement -

Related news

error: Content is protected !!