Thursday, May 2, 2024
spot_imgspot_img
spot_imgspot_img

ಪುತ್ತೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ತಂದೆ-ಮಗನಿಗೆ ಹಲ್ಲೆ ಜೀವ ಬೆದರಿಕೆ; ದೂರು ದಾಖಲು..!

- Advertisement -G L Acharya panikkar
- Advertisement -

ಪುತ್ತೂರು: ರಸ್ತೆಯಲ್ಲಿ ಮನೆ ಕಡೆ ನಡೆದುಕೊಂಡು ಹೋಗುತ್ತಿದ್ದ ತಂದೆ-ಮಗನಿಗೆ ಕಾರಿನಲ್ಲಿ ಬಂದ ಇಬ್ಬರು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿರುವ ಘಟನೆ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಎಂಬಲ್ಲಿ ನಡೆದಿದೆ.

ಆರೋಪಿಗಳನ್ನು ತಿಂಗಲಾಡಿ ಗ್ರಾಮ ,ಪುತ್ತೂರು ನಿವಾಸಿ ಸಿದ್ದಿಕ್ ಅನ್ಸಾರ್ ಹಾಗೂ ಕೆಮ್ಮಿಂಜೆ ಗ್ರಾಮ ,ಪುತ್ತೂರು ನಿವಾಸಿ ಶಮೀರ್ ಎನ್ನಲಾಗಿದೆ.

ಹಲ್ಲೆಗೊಳಗಾದ ತಂದೆ-ಮಗನನ್ನು ಕೆಮ್ಮಿಂಜೆ ನಿವಾಸಿ ಜುಬೇರ್ (30) ಹಾಗೂ ಅವರ ತಂದೆ ಆದಂ ಎಂದು ಗುರುತಿಸಲಾಗಿದೆ.

ಇವರು ಗುರುವಾರ ರಾತ್ರಿ ಮೊಟ್ಟೆತ್ತಡ್ಕ ಎಂಬಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ಆರೋಪಿಗಳು ತಂದೆ-ಮಗನನ್ನು ಅಡ್ಡಗಟ್ಟಿ ಅವಾಚ್ಯವಾಗಿ ಬೈದಿದ್ದಲ್ಲದೆ ಬಳಿಕ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿ ತೆರಳಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ, ಅ ಕ್ರ ನಂ 31-2024. ಕಲಂ:341,504, 323, 324,506 ಜೊತೆಗೆ 34 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!