- Advertisement -
- Advertisement -


ಪುತ್ತೂರು: ಮರ ಕಡಿಯುವ ವೇಳೆ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮೂಲತಃ ಕೆಮ್ಮಿಂಜೆ ಗ್ರಾಮದ ನೈತಾಡಿ ನಿವಾಸಿ ಪ್ರಸ್ತುತ ಕೂರ್ನಡ್ಕದಲ್ಲಿ ವಾಸವಿರುವ ಖಲಂದರ್ ಎಂದು ಗುರುತಿಸಲಾಗಿದೆ.
ಮಡಿಕೇರಿಯ ತೋಟವೊಂದರಲ್ಲಿ ಮರ ಕೆಡಿಯಲೆಂದು ಹೋದವರು ಆಕಸ್ಮಿಕವಾಗಿ ಮರದಿಂದ ಬಿದ್ದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
- Advertisement -