- Advertisement -
- Advertisement -
ಪುತ್ತೂರು: ಅಡಿಕೆ ಕೊಯ್ಯುವ ವೇಳೆ ಮರದಿಂದ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬೆಟ್ಟಂಪಾಡಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ನಿಡ್ನಳ್ಳಿ ಗ್ರಾಮದ ತಂಬುತ್ತಡ್ಕ ನಿವಾಸಿ ಸಯ್ಯದ್ (45) ಎಂದು ಗುರುತಿಸಲಾಗಿದೆ.
ಇವರು ಬೆಟ್ಟಂಪಾಡಿ ಸಮೀಪದ ಕೃಷಿಕರೋರ್ವರ ಮನೆಗೆ ಅಡಿಕೆ ಕೊಯ್ಯಲು ತೆರಳಿದ್ದರು. ಅಡಿಕೆ ಕೊಯ್ಯುವ ವೇಳೆ ಕಾಲು ಜಾರಿ ಮರದಿಂದ ಕೆಳಗೆ ಬಿದ್ದ ಇವರನ್ನು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ತಲುಪುವ ವೇಳೆ ಅವರು ಮೃತಪಟ್ಟಿದ್ದಾರೆ.
- Advertisement -