Thursday, April 25, 2024
spot_imgspot_img
spot_imgspot_img

ಪುತ್ತೂರು: ಬೆಳ್ಳಂಬೆಳ್ಳಗೆ ಭೀಕರ ಅಪಘಾತ-ಆರ್ ಎಸ್ ಎಸ್ ನ ಮಂಗಳೂರು ವಿಭಾಗ ಗ್ರಾಮ ವಿಕಾಸ ಪ್ರಮುಖ್ ಬಂಟ್ವಾಳ ವೆಂಕಟ್ರಮಣ ಹೊಳ್ಳ ಮೃತ್ಯು!

- Advertisement -G L Acharya panikkar
- Advertisement -

ಪುತ್ತೂರು: ಕಬಕ ಸಮೀಪ ಪೋಳ್ಯ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗ್ರಾಮವಿಕಾಸ ಮಂಗಳೂರು ವಿಭಾಗ ಪ್ರಮುಖ್ ಆಗಿರುವ ಬಂಟ್ವಾಳ ಅಗರ್ತಬೈಲು ನಿವಾಸಿ ವೆಂಕಟ್ರಮಣ ಹೊಳ್ಳ ರವರು ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಅವರು ಪುತ್ತೂರು ಪೊಲೀಸ್ ವಸತಿ ನಿಲಯಗಳ ಬಳಿಯ ಪಂಚವಟಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೇಂದ್ರದಲ್ಲಿ ರಾತ್ರಿ ತಂಗಿದ್ದು ಡಿ.15ರ ನಸುಕಿನ ಜಾವ ಬಂಟ್ವಾಳದ ಮನೆಗೆ ಬೈಕ್ ನಲ್ಲಿ ತೆರಳುವ ವೇಳೆ ಪೋಳ್ಯ ಸಮೀಪದ ಪೊಲೀಸ್ ಬ್ಯಾರಿಕೇಡ್ ಬಳಿ ಈ ಅಪಘಾತ ಸಂಭವಿಸಿದೆ.

ಅಪಘಾತ ಸ್ಥಳದಲ್ಲಿ ಬ್ಯಾರಿಕೇಡ್ ಮತ್ತು ಬೈಕ್ ಗೆ ಹಾನಿಯಾಗಿದೆ. ವೆಂಕಟ್ರಮಣ ಹೊಳ್ಳ ಅವರ ಮೃತ ದೇಹ ಘಟನೆಯ ತುಸು ದೂರ ಬಿದ್ದಿದ್ದು ಅವರ ತಲೆ ಜಜ್ಜಿ ಹೋಗಿದೆ. ವೆಂಕಟ್ರಮಣ ಹೊಳ್ಳ ಅವರು ಚಲಾಯಿಸುತ್ತಿದ್ದ ಬೈಕ್ ಗೆ ಬೇರೆ ಯಾವುದೋ ವಾಹನ ಡಿಕ್ಕಿಯಾಗಿ ಹೋಗಿರಬಹುದೇ ಎಂಬ ಶಂಕೆಯು ವ್ಯಕ್ತವಾಗುತ್ತಿದೆ.

- Advertisement -

Related news

error: Content is protected !!