ಪುತ್ತೂರು: ಎಂ.ಡಿ.ಎಂ.ಎ ಮಾದಕವಸ್ತುವಿನೊಂದಿಗೆ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಜೇಶ್ ಕೆ.ವಿ ಮತ್ತು ಸಿಬ್ಬಂಧಿಯವರು ವಶಕ್ಕೆ ಪಡೆದ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಕೂಟೇಲು ದರ್ಗಾ ಶರೀಫ್ ಬಳಿ ನಡೆದಿದೆ.
ಆರೋಪಿಯನ್ನು ಬೆಳ್ತಂಗಡಿ ಇಳಂತಿಲ ಗ್ರಾಮದ ನಿವಾಸಿ ಯಾಸಿರ್ (29) ಎಂದು ಗುರುತಿಸಲಾಗಿದೆ.
ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಕೂಟೇಲು ದರ್ಗಾ ಶರೀಫ್ ಬಳಿ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಜೇಶ್ ಕೆ.ವಿ ಮತ್ತು ಸಿಬ್ಬಂಧಿಯವರು ವಾಹನ ತಪಾಸಣೆಯ ನಿಮಿತ್ತ ಕಾರನ್ನು ನಿಲ್ಲಿಸಿದಾಗ, ಅದರ ಚಾಲಕ ವಾಹನವನ್ನು ನಿಲ್ಲಿಸಿ ಪರಾರಿಯಾಗಲು ಯತ್ನಿಸಿರುತ್ತಾನೆ. ಆತನನ್ನು ತಡೆದು ವಿಚಾರಸಿ, ಕಾರನ್ನು ಪರಿಶೀಲಿಸಿದಾಗ ಅದರಲ್ಲಿ ಅಂದಾಜು ರೂ 13,000/- ಮೌಲ್ಯದ 6.4 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆಯಾಗಿರುತ್ತದೆ. ಮುಂದಿನ ಕಾನೂನು ಕ್ರಮಕ್ಕಾಗಿ ಕಾರು, ಕಾರಿನಲ್ಲಿದ್ದ ಚಿಕ್ಕ ಎಲೆಕ್ಟ್ರೋನಿಕ್ ಡಿಜಿಟಲ್ ತೂಕ ಮಾಪನ ಸಾಧನ, 01 ಮೊಬೈಲ್ ಮತ್ತು ಎಂ.ಡಿ.ಎಂ.ಎ ಮಾದಕವಸ್ತುವಿನೊಂದಿಗೆ ಆರೋಪಿಯನ್ನು ವಶಕ್ಕೆ ಪಡೆದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.