Friday, June 27, 2025
spot_imgspot_img
spot_imgspot_img

ಪುತ್ತೂರು: ಶಂಕಿತ ಡೆಂಗ್ಯೂ ಜ್ವರಕ್ಕೆ 8 ವರ್ಷದ ಬಾಲಕಿ ಬಲಿ

- Advertisement -
- Advertisement -
vtv vitla

ಪುತ್ತೂರು: ಜ್ವರದಿಂದ ಬಳಲುತ್ತಿದ್ದ ಬಾಲಕಿಯೋರ್ವಳು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

8 ವರ್ಷದ ಬಾಲಕಿ ಸಾನಿಧ್ಯ ಜ್ವರದಿಂದ ಮೃತಪಟ್ಟ ಬಾಲಕಿ. ಪುತ್ತೂರಿನ ಬೊಳುವಾರಿನಲ್ಲಿ ವಾಸ್ತವ್ಯ ಹೊಂದಿರುವ ಮೂಲತಃ ಸುರತ್ಕಲ್ ಕೃಷ್ಣಾಪುರ ನಿವಾಸಿ ನಾಮ್ ದೇವ್ ಆಚಾರ್ಯ ಅವರ ಪುತ್ರಿ ಸಾನಿಧ್ಯ.

ಜ್ವರದಿಂದ ಬಳಲುತ್ತಿದ್ದ ಸಾನಿಧ್ಯಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆ ಚೇತರಿಸಿಕೊಳ್ಳದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಲಾಗಿತ್ತು. ಆದರೆ ಅಲ್ಲಿ ಆಕೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಪರೀಕ್ಷಿಸಿದ ವೈದ್ಯರು ಮಗುವಿಗೆ ಡೆಂಗ್ಯೂ ಹಾಗೂ ನ್ಯೂಮೋನಿಯಾ ಆಗಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ. ಸಾನಿಧ್ಯ ಅವರು ತಂದೆ, ತಾಯಿಯನ್ನು ಅಗಲಿದ್ದಾರೆ.

- Advertisement -

Related news

error: Content is protected !!