- Advertisement -
- Advertisement -
ಪುತ್ತೂರು: ಪುತ್ತೂರು ಉಪವಿಭಾಗಕ್ಕೆ ನೂತನ ಐಪಿಎಸ್ ಅಧಿಕಾರಿ ಎ.ಎಸ್ಪಿ ಲಖನ್ ಸಿಂಗ್ ಯಾದವ್ ಸೆ.6ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಪುತ್ತೂರು ಉಪವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಿವೈಎಸ್ಪಿ ದಿನಕರ್ ಶೆಟ್ಟಿಯವರಿಗೆ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಮೈಸೂರಿನಲ್ಲಿ ಪ್ರೊಬೆಷನರಿ ಎ.ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಲಖನ್ ಸಿಂಗ್ ಯಾದವ್ ಅವರು ಪುತ್ತೂರು ಉಪವಿಭಾಗದಲ್ಲಿ ಪ್ರಥಮ ನೇಮಕಾತಿಯೊಂದಿಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ವರ್ಗಾವಣೆಗೊಂಡಿರುವ ಡಿವೈಎಸ್ಪಿ ದಿನಕರ್ ಶೆಟ್ಟಿಯವರು ಸುರತ್ಕಲ್ ನಿವಾಸಿಯಾಗಿದ್ದು ಈ ಹಿಂದೆ ಅವರು ಎಸಿಬಿಯಲ್ಲಿ ಡಿವೈಸ್ಪಿಯಾಗಿ ಪುತ್ತೂರಿಗೆ ವರ್ಗಾವಣೆಗೊಂಡಿದ್ದರು.
- Advertisement -