ಪುತ್ತೂರು: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕೂಲಿ ಕಾರ್ಮಿಕರ ನಡುವೆ ನಡೆದ ಹಲ್ಲೆ ನಡೆಸಿದ್ದು ಚೂರಿ ಇರಿತದಿಂದ ಗಾಯಗೊಂಡವರ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಚೂರಿ ಇರಿತ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾದ ವ್ಯಕ್ತಿ ಬೆಳಗಾಂ ಜಿಲ್ಲೆಯ ಮಲ್ಲಪುರ ಗೋಕಾಕ್ ನಿವಾಸಿ ಕೂಲಿ ಕಾರ್ಮಿಕ ಆನಂದ ಬಾಂದಾವಿ (35) ಹಾಗೂ ಆರೋಪಿಯನ್ನು ಅವಿನಾಶ್ ಎಂದು ಗುರುತಿಸಲಾಗಿದೆ.
ಪುತ್ತೂರು ಕೆ.ಎಸ್. ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿಅವರ ಪರಿಚಯದ ಅವಿನಾಶ್, ನಾರಾಯಣ, ದುರ್ಗೇಶ್ ಮತ್ತು ಹರೀಶ್ ಎಂಬವರೊಂದಿಗೆ ಕುಳಿತುಕೊಂಡು ಮಾತನಾಡುತ್ತಿದ್ದ ವೇಳೆ ಆರೋಪಿ ಅವಿನಾಶ್ ಏಕಾಏಕಿಯಾಗಿ ಆನಂದ ಅವರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಬಳಿಕ ಅಲ್ಲಿಂದ ತೆರಳಿ ಸ್ವಲ್ಪ ದೂರ ನಿಂತಿದ್ದಾಗ, ಅಲ್ಲಿಗೆ ಬಂದ ಅವಿನಾಶ್ ನು ಕೊಲೆ ಮಾಡುವುದಾಗಿ ಹೇಳಿ, ಚಾಕುವಿನಿಂದ ಆನಂದ್ ಅವರ ಹೊಟ್ಟೆಗೆ ಚೂರಿ ಇರಿದಿದ್ದಾನೆ. ಈ ವೇಳೆ ಇತರರು ಬರುವುದನ್ನು ಕಂಡು ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆಯಿಂದ ತೀರ್ವ ಗಾಯಗೊಂಡ ಆನಂದ್ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಈ ಬಗ್ಗೆ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ:30 /2024 ಕಲಂ: 341,504,323, 307 ಐ.ಪಿ.ಸಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.