Saturday, May 4, 2024
spot_imgspot_img
spot_imgspot_img

ಪುತ್ತೂರು: ಆಟೋಚಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ: ದೂರು ದಾಖಲು..!

- Advertisement -G L Acharya panikkar
- Advertisement -

ಪುತ್ತೂರು: ಆಟೋ ಚಾಲಕರೊಬ್ಬರು ತನ್ನ ಆಟೋರಿಕ್ಷಾದಲ್ಲಿ ಪ್ರಯಾಣಿಕರೋರ್ವರನ್ನು ಕುಳ್ಳಿರಿಸಿಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತರು ಆಟೋ ಬಳಿ ಬಂದು ಹಲ್ಲೆ ನಡೆಸಿ, ಜೀವಬೆದರಿಕೆ ಹಾಕಿರುವ ಘಟನೆ ಪುತ್ತೂರು ತಾಲೂಕು ಪಡವನ್ನೂರು ಗ್ರಾಮದ ಕೆಳಗಿನ ಕನ್ನಡ್ಕ ಬಸ್ ನಿಲ್ದಾಣ ಎಂಬಲ್ಲಿ ನಡೆದಿದೆ.

ಆರೋಪಿಗಳನ್ನು ದಯಾನಂದ, ಅಚ್ಚುತ ಹಾಗೂ ಇಬ್ಬರು ಅಪರಿಚಿತರು ಎಂದು ಗುರುತಿಸಲಾಗಿದೆ.

ಪುತ್ತೂರು ನಿವಾಸಿ ನಾಗೇಶ (34) ರವರ ದೂರಿನಂತೆ, ಬೆಳಗಿನ ಜಾವ‌, ತನ್ನ ಬಾಬ್ತು ಆಟೋರಿಕ್ಷಾದಲ್ಲಿ ಪ್ರಯಾಣಿಕರೋರ್ವರನ್ನು ಕುಳ್ಳಿರಿಸಿಕೊಂಡು, ಪುತ್ತೂರು ತಾಲೂಕು ಪಡವನ್ನೂರು ಗ್ರಾಮದ ಕೆಳಗಿನ ಕನ್ನಡ್ಕ ಬಸ್ ನಿಲ್ದಾಣ ಎಂಬಲ್ಲಿ ತಲುಪಿದಾಗ, ಆರೋಪಿಗಳಾದ ದಯಾನಂದ, ಅಚ್ಚುತ ಹಾಗೂ ಇಬ್ಬರು ಅಪರಿಚಿತರು ಆಟೋ ಬಳಿ ಬಂದು, ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ತಕರಾರು ತೆಗೆದು ಹಲ್ಲೆ ನಡೆಸಿ, ಜೀವಬೆದರಿಕೆ ಹಾಕಿ ತೆರಳಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 38-2024 ಕಲಂ: IPC 1860 (U/s-324,506) ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!