Monday, May 6, 2024
spot_imgspot_img
spot_imgspot_img

ಪುತ್ತೂರು : ಬ್ಯಾನರ್ ಪ್ರಕರಣ; ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ಕುಮಾರ್ ರೈ

- Advertisement -G L Acharya panikkar
- Advertisement -

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಸಂಘಟನೆ ಕಾರ್ಯಕರ್ತರನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿರವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ನಮ್ಮಿಂದಾಗುವ ಎಲ್ಲಾ ಕೆಲಸವನ್ನು ನಾವು ಮಾಡಿದ್ದೇವೆ. ಇದರಲ್ಲಿ ಕಾಂಗ್ರೆಸ್ ಪಕ್ಷದ ಯಾವುದೇ ಕೈವಾಡವಿಲ್ಲ, ಏನೆಲ್ಲಾ ವಿಚಾರ ಆಗಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಪೊಲೀಸರು ಪ್ರಕರಣವನ್ನು ಅಲ್ಲಿಂದಲ್ಲಿಗೆ ಮುಗಿಸುವ ಯೋಚನೆಯಲ್ಲಿದ್ದರು. ನಿಮ್ಮಲ್ಲಿಗೂ ಕೆಲವರು ಸಂಧಾನಕ್ಕೆ ಬಂದಿದ್ದಾರೆ ಎನ್ನುವುದು ಗೊತ್ತಾಗಿದೆ. ಘಟನೆ ಬಗ್ಗೆ ತಿಳಿಯುತ್ತಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದೆ. ಏನು ಸಹಕಾರ ಬೇಕಿದ್ದರೂ ನನಗೆ ಹೇಳಿ ಎಂದು ಶಾಸಕ ಅಶೋಕ್ ಕುಮಾರ್ ರೈ ಸಾಂತ್ವನದ ಮಾತನ್ನಾಡಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ ಕೆ ಬಿ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!