Sunday, June 29, 2025
spot_imgspot_img
spot_imgspot_img

ಪುತ್ತೂರು : ಕಾರು- ಸ್ಕೂಟರ್ ಡಿಕ್ಕಿ; ಸವಾರ ಮೃತ್ಯು

- Advertisement -
- Advertisement -

ಪುತ್ತೂರು: ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಮುಂಜಾನೆ ಕಾರು ಹಾಗೂ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ.

ಇಸ್ಮಾಯಿಲ್ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ ಸ್ಕೂಟ‌ರ್‍ ನಜ್ಜುಗುಜ್ಜಾಗಿದೆ. ಅಪಘಾತಕ್ಕೊಳಗಾದ ಮಡಿಕೇರಿ ನೊಂದಾಯಿತ ಕಾರಿನಲ್ಲಿದ್ದವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮೃತ ಇಸ್ಮಾಯಿಲ್ ಪತ್ನಿ, ಮೂರು ಹೆಣ್ಣು ಮತ್ತು ಒಂದು ಗಂಡು ಮಕ್ಕಳನ್ನು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

- Advertisement -

Related news

error: Content is protected !!