- Advertisement -
- Advertisement -


ಪುತ್ತೂರು ಬಿಜೆಪಿ ಕಚೇರಿಯಲ್ಲಿ ಕೆದಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ 12 ರಲ್ಲಿ 12 ಸ್ಥಾನದಲ್ಲೂ ಅಭೂತಪೂರ್ವ ಗೆಲುವನ್ನು ಸಾಧಿಸಿದ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಶುಭಾ ಹಾರೈಸಿದರು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿಬಿ, ಬಿಜೆಪಿ ಸಂಘಟನಾ ಪರ್ವ ಜಿಲ್ಲಾ ಸಹ-ಚುನಾವಣಾಧಿಕಾರಿ ಸಾಜ ರಾಧಾಕೃಷ್ಣ ಆಳ್ವ, ಜಿಲ್ಲಾ ಸಹಕಾರ ಭಾರತಿ ಕಾರ್ಯದರ್ಶಿ ನಾರಾಯಣ ಪ್ರಕಾಶ್, ಮಂಡಲ ಉಪಾಧ್ಯಕ್ಷರುಗಳಾದ ಹರಿಪ್ರಸಾದ್ ಯಾದವ್,ಯತೀಂದ್ರ ಕೊಚ್ಚಿ, ಯುವರಾಜ್ ಕೆ ಪೆರಿಯತ್ತೊಡಿ, ಮಂಡಲ ಪ್ರಧಾನ ಕಾರ್ಯದರ್ಶಿ ನಾಗೇಶ್ ಪ್ರಭು, ಕಚೇರಿ ಕಾರ್ಯದರ್ಶಿ ಗೋವರ್ಧನ್, ನಿಕಟಪೂರ್ವ ಅರಿಯಡ್ಕ ಶಕ್ತಿ ಕೇಂದ್ರ ಪ್ರಮುಖ್ ಸಚಿನ್ ರೈ, ನಿಕಟಪೂರ್ವ ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಸುರೇಶ್ ಆಳ್ವ, ಪಕ್ಷದ ಹಿರಿಯರಾದ ವಿಶ್ವನಾಥ ಕುಲಾಲ್ ರವರು ಉಪಸ್ಥಿತರಿದ್ದರು.
- Advertisement -