ಪುತ್ತೂರು: ಕಾಂಗ್ರೇಸ್ ಕಾರ್ಯಕರ್ತನ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತನೊಬ್ಬ ಮನೆಗೆ ನುಗ್ಗಿ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ ಘಟನೆ ಪುತ್ತೂರಿನ ಪುರುಷಕಟ್ಟೆ ಎಂಬಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಪುರುಷರಕಟ್ಟೆ ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದ್ದು, ಪುರುಷರಕಟ್ಟೆ ಸಮೀಪದ ಇಂದ್ರನಗರ ರಕ್ತೇಶ್ವರಿಕಟ್ಟೆ ನಿವಾಸಿ ಪ್ರವೀಣ್ ಎಂಬಾತ ಹಲ್ಲೆ ನಡೆಸಿದ ವ್ಯಕ್ತಿ ಎನ್ನಲಾಗಿದೆ.
ಹಲ್ಲೆಗೊಳಗಾದ ಪ್ರವೀಣ್ ಕಳೆದ ಕೆಲ ತಿಂಗಳ ಹಿಂದೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು ಎನ್ನಲಾಗಿದೆ. ಪ್ರವೀಣ್ ಚುನಾವಣೆ ವೇಳೆ ಪುತ್ತೂರಿನ ಹಾಲಿ ಶಾಸಕರ ಪರ ಪ್ರಚಾರ ಮಾಡಿದ್ದರು ಎನ್ನಲಾಗಿದೆ.
ಇದರ ಜೊತೆಗೆ ಪುರುಷರಕಟ್ಟೆ ಭಾಗದಲ್ಲಿ ಕೆಲ ಬಿಜೆಪಿ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದರಿಂದ ಇದೇ ವಿಚಾರದಲ್ಲಿ ಪ್ರವೀಣ್ ಎಂಬಾತ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಇದರ ಜೊತೆಗೆ ಮನೆಗೆ ನುಗ್ಗಿ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಗೊಳಗಾಗಿರುವ ಪ್ರವೀಣ್ ಗೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.