Friday, March 29, 2024
spot_imgspot_img
spot_imgspot_img

ಪುತ್ತೂರು : ಆಕಸ್ಮಿಕವಾಗಿ ಕೆರೆಗೆ ಬಿದ್ದು ವಿದ್ಯಾರ್ಥಿ ಸಾವು

- Advertisement -G L Acharya panikkar
- Advertisement -

ಪುತ್ತೂರು : ಆಕಸ್ಮಿಕವಾಗಿ ಕೆರೆಗೆ ಬಿದ್ದು ಸ್ನಾತಕೋತ್ತರ ಪದವಿ ವಿದ್ಯಾರ್ಥಿಯೋರ್ವ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿ ತಾಲೂಕಿನ ಬೆಟ್ಟಂಪಾಡಿ ಸಮೀಪದ ಗಮ್ಮಟಗದ್ದೆ ಎಂಬಲ್ಲಿ ನಡೆದಿದೆ.

ಪವನ್ (22) ಎಂಬವರೇ ಸಾವನ್ನಪ್ಪಿದ ದುರ್ದೈವಿ. ನಿನ್ನೆ ರಾತ್ರಿ ಮನೆ ಸಮೀಪದಲ್ಲಿ ನಡೆಯುತ್ತಿದ್ದ ನೇಮಕ್ಕೆ ಹೋಗಿಬರುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದ ಪವನ್ ಬೆಳಗಾದರೂ ಮನೆಗೆ ಹಿಂದಿರುಗಲೇ ಇಲ್ಲ. ಇದರಿಂದ ಅನುಮಾನಗೊಂಡ ಮನೆಯವರು ಹುಡುಕಾಟ ನಡೆಸಿದಾಗ ಮನೆ ಸಮೀಪದ ಕೆರೆಯಲ್ಲಿ ಚಪ್ಪಲಿ ತೇಲುತ್ತಿದ್ದು, ಅನುಮಾನಗೊಂಡು ಕೆರೆಯಲ್ಲಿ ಶೋಧಕಾರ್ಯ ನಡೆಸಿದಾಗ ಶವಪತ್ತೆಯಾಗಿದೆ.

ಈ ಕುರಿತು ಸಂಪ್ಯ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಮೃತ ಪವನ್ ತಂದೆ, ತಾಯಿ ಹಾಗೂ ಐವರು ಸಹೋದರಿಯರನ್ನು ಅಗಲಿದ್ದಾರೆ.

- Advertisement -

Related news

error: Content is protected !!