Saturday, July 25, 2026
spot_imgspot_img
spot_imgspot_img

ಪುತ್ತೂರು: ಮಾದಕ ದ್ರವ್ಯ ಸೇವನೆ: ವ್ಯಕ್ತಿ ಪೊಲೀಸ್ ವಶಕ್ಕೆ!

- Advertisement -
- Advertisement -

ಪುತ್ತೂರು: ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಫೆ.17 ರಂದು ನಡೆದಿದೆ. ಸಾರ್ವಜನಿಕರಿಂದ ಬಂದ ಮಾಹಿತಿಯ ಮೇರೆಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ಉಪ್ಪಿನಂಗಡಿ ಪೊಲೀಸ್ ಠಾಣೆ ಉಪ ನಿರೀಕ್ಷಕ ಸುರೇಶ್ ಸಿ.ಟಿ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ವ್ಯಕ್ತಿಯನ್ನು ವಶಕ್ಕೆ ಪಡೆದರು.

ವಿಚಾರಣೆ ವೇಳೆ ಆತ ಮಹಮ್ಮದ್ ಮೋಹಾದ್ ಎಸ್ (33), ವಿಟ್ಲ ಪಡ್ನೂರು ಗ್ರಾಮ ನಿವಾಸಿ ಎಂದು ತಿಳಿದುಬಂದಿದೆ. ನಂತರ ವೈದ್ಯಕೀಯ ತಪಾಸಣೆಯಲ್ಲಿ ಆತ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ.

ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 24/2026 ರಂತೆ ಎನ್‌ಡಿಪಿಎಸ್ ಕಾಯ್ದೆ ಕಲಂ 27(b) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.

- Advertisement -

Related news

error: Content is protected !!