- Advertisement -
- Advertisement -
ಪುತ್ತೂರು: ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ನೈತಾಡಿ-ಬೆದ್ರಾಳ ಭಗತ್ ಸಿಂಗ್ ಸಾರ್ವಜನಿಕ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಲು ಯತ್ನಿಸುತ್ತಿದ್ದ ಯುವಕನೋರ್ವನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಸಾಝಿಲ್ ಅಹಮ್ಮದ್ (24) ಬಂಧಿತ ಆರೋಪಿ ನರಿಮೊಗರು ಗ್ರಾಮದವನು. ನಿನ್ನೆ ಸಂಜೆ ನೈತಾಡಿ -ಬೆದ್ರಾಳ ಸಾರ್ವಜನಿಕ ರಸ್ತೆಯಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ಇಬ್ಬರು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸ್ ನಿರೀಕ್ಷಕರು ಠಾಣಾ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಅದರಲ್ಲಿ ಓರ್ವ ಸಿಕ್ಕಿಬಿದ್ದಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ. ಪರಾರಿಯಾದಾತ ಮಹಮ್ಮದ್ ಅಶ್ರಫ್ ಎಂದು ತಿಳಿದು ಬಂದಿದೆ.
ಇನ್ನು ಬಂಧಿತನಿಂದ ಸುಮಾರು 3 ಸಾವಿರ ರೂ. ಮೌಲ್ಯದ 166 ಗ್ರಾಂ ಗಾಂಜಾ, ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -