- Advertisement -
- Advertisement -
ಪುತ್ತೂರು: ಉದ್ಯೋಗ ನೀಡುವುದಾಗಿ ಯುವತಿಯೊಬ್ಬರಿಂದ 7 ತಿಂಗಳ ಅವಧಿಯಲ್ಲಿ ಹಂತ ಹಂತವಾಗಿ ಹಣ ಪಡೆದು ವಂಚನೆ ಮಾಡಿರುವ ಘಟನೆ ನಡೆದಿದೆ.
ಆರ್ಯಾಪು ಗ್ರಾಮದ ಒಳತ್ತಡ್ಕ ನಿವಾಸಿ ನಿಶ್ಮಿತಾ ವಂಚನೆಗೊಳಗಾಗಿದ್ದು ಅವರು ಪೊಲೀಸರಿಗೆ ದೂರು ನೀಡಿದ್ದಾರೆ. 2023 ರ ಜೂ.12 ರಂದು ಪತ್ರಿಕೆಯೊಂದರಲ್ಲಿ ಪರಿಶೀಲಿಸಿ, ಅದರಲ್ಲಿದ್ದ ಮೊಬೈಲ್ ಸಂಖ್ಯೆಗೆ ಕರೆಮಾಡಿ ವಿಚಾರಿಸಿ, ಬಳಿಕ ಅವರುಗಳು ಸೂಚಿಸಿದಂತೆ 2023 ರ ಜೂ.28 ರಿಂದ 2024 ರ ಜ.12 ರ ತನಕ ಹಂತ ಹಂತವಾಗಿ ಅಪರಿಚಿತ ಆರೋಪಿ ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಒಟ್ಟು 2,25,001 ರೂ ಹಣವನ್ನು ಪಾವತಿ ಮಾಡಿದ್ದು, ಈವರೆಗೂ ನಿಶ್ಮಿತಾ ಅವರಿಗೆ ಉದ್ಯೋಗವನ್ನೂ ನೀಡದೇ, ಹಣವನ್ನು ಮೋಸದಿಂದ ಪಡೆದು ವಂಚಿಸಿರುತ್ತಾರೆ. ಈ ಕುರಿತು ಅವರು ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
- Advertisement -