Friday, May 17, 2024
spot_imgspot_img
spot_imgspot_img

ಪುತ್ತೂರು : ಲಂಚ ಪಡೆದ ಗ್ರಾಮಕರಣಿಕ; 30 ಸಾವಿರ ರೂ.ಲಂಚಕ್ಕೆ 35 ಸಾವಿರ ಮರಳಿ ಕೊಡಿಸಿದ ಶಾಸಕ ಅಶೋಕ್‌ ಕುಮಾರ್ ರೈ

- Advertisement -G L Acharya panikkar
- Advertisement -

ಪುತ್ತೂರು: ಗ್ರಾಮಕರಣಿಕರೋರ್ವರು ಕಡತ ವಿಲೇವಾರಿಗೆ 30 ಸಾವಿರ ರೂ. ಲಂಚ ಪಡೆದುಕೊಂಡಿದ್ದು, ಲಂಚ ಪಡೆದ ಮೊತ್ತಕ್ಕೆ 5 ಸಾವಿರ ಸೇರಿಸಿ ಮರಳಿಸುವಂತೆ ಶಾಸಕ ಅಶೋಕ್‌ ಕುಮಾರ್ ರೈ ಸೂಚಿಸಿದ್ದಾರೆ.

ಪುತ್ತೂರು ಕ್ಷೇತ್ರ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಜಮೀನಿಗೆ ಸಂಬಂಧಪಟ್ಟ ಕಡತವನ್ನು ವಿಲೇವಾರಿ ಮಾಡುವಾಗ ಗ್ರಾಮ ಕರಣಿಕ ಲಂಚ ಪಡೆದಿದ್ದು, ಲಂಚ ಕೊಡುವುದಿಲ್ಲ ಶಾಸಕರಲ್ಲಿ ದೂರು ನೀಡುವುದಾಗಿ ವ್ಯಕ್ತಿ ಹೇಳಿದಾಗ ಗ್ರಾಮ ಕರಣಿಕ ನನಗೆ ಶಾಸಕರ ಪರಿಚಯ ಇದೆ ಎಂದು ಹೇಳಿದ್ದನು. ಲಂಚ ಕೊಟ್ಟ ವ್ಯಕ್ತಿ ಶಾಸಕರಲ್ಲಿ ದೂರು ನೀಡಿದ್ದು 24 ಗಂಟೆಯೊಳಗೆ ಪಡೆದ ಮೊತ್ತಕ್ಕೆ 5 ಸಾವಿರ ಸೇರಿಸಿ ಮರಳಿಸಬೇಕು ಎಂದು ಖಡಕ್‌ ಸೂಚನೆ ನೀಡಿದ್ದಾರೆ.

- Advertisement -

Related news

error: Content is protected !!