- Advertisement -
- Advertisement -
ಪುತ್ತೂರು: ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಕಾರಿನಲ್ಲಿ ಒಂದು ತಲವಾರು ಪತ್ತೆಯಾಗಿರುವ ಘಟನೆ ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಜಂಕ್ಷನ್ ಬಳಿ ನಡೆದಿದೆ.
ತಡರಾತ್ರಿ ಪೊಲೀಸ್ ನಿರೀಕ್ಷಕರಾದ ಸತೀಶ್ ಜಿ.ಜೆ, ಪುತ್ತೂರು ನಗರ ಪೊಲೀಸ್ ಠಾಣೆರವರು ಠಾಣಾ ಸಿಬ್ಬಂದಿಗಳೊಂದಿಗೆ ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಜಂಕ್ಷನ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಕಾರಿನಲ್ಲಿ ಒಂದು ತಲವಾರು ಪತ್ತೆಯಾಗಿರುತ್ತದೆ.
ಕಾರಿನಲ್ಲಿದ್ದ ಗೋಳ್ತಮಜಲು ಗ್ರಾಮ, ಬಂಟ್ವಾಳ ನಿವಾಸಿ ಕಿಶೋರ್ (36), ಕಬಕ ಗ್ರಾಮ, ಪುತ್ತೂರು ನಿವಾಸಿ ಮನೋಜ್ (23), ಕಬಕ ಗ್ರಾಮ, ಪುತ್ತೂರು ನಿವಾಸಿ ಆಶಿಕ್ (28) ಮತ್ತು ಪಡ್ನೂರು ಗ್ರಾಮ, ಪುತ್ತೂರು ನಿವಾಸಿ ಸನತ್ ಕುಮಾರ್ (24) ಎಂಬವರನ್ನು ವಶಕ್ಕೆ ಪಡೆದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
- Advertisement -