Wednesday, May 8, 2024
spot_imgspot_img
spot_imgspot_img

ಹಿಂದೂ ಐಕ್ಯತಾ ಸಮಾವೇಶ: ಇಂದು ಪುತ್ತೂರು, ಉಪ್ಪಿನಂಗಡಿ ಠಾಣಾ ಸರಹದ್ದಿನ ಎಲ್ಲಾ ಬಾರ್ ಗಳು ಬಂದ್- ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.

- Advertisement -G L Acharya panikkar
- Advertisement -

ಮಂಗಳೂರು: ಹಿಂದೂ ಜಾಗರಣಾ ವೇದಿಕೆಯ ವತಿಯಿಂದ ನಡೆಯುವ ಹಿಂದೂ ಐಕ್ಯತಾ ಸಮಾವೇಶವು ಮಾ. 21 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡಲು ಸಾರ್ವಜನಿಕರ ಹಿತದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರ ಅಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ,

ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಪುತ್ತೂರು ನಗರ, ಗ್ರಾಮಾಂತರ, ಉಪ್ಪಿನಂಗಡಿ ಠಾಣಾ ಸರಹದ್ದಿನ ಎಲ್ಲಾ ಬಾರ್, ವೈನ್ ಶಾಪ್, ಸರಕಾರಿ ಮದ್ಯ ಮಳಿಗೆಗಳನ್ನು ಮಾರ್ಚ್ 21 ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿ ಅಧಿಸೂಚನೆ ಹೊರಡಿಸಿದ್ದಾರೆ.

- Advertisement -

Related news

error: Content is protected !!