Sunday, June 29, 2025
spot_imgspot_img
spot_imgspot_img

ಪುತ್ತೂರು: ಅಕ್ರಮವಾಗಿ ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಾಗಾಟ: ನಾಲ್ವರ ಬಂಧನ..!!

- Advertisement -
- Advertisement -

ಪುತ್ತೂರು : ರಕ್ಷಿತಾರಣ್ಯದಿಂದ ಹಾಲುಮಡ್ಡಿ ಮತ್ತು ಮೇಣ ಸಂಗ್ರಹಿಸಿ ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಮಾಡಿದ ಅರಣ್ಯ ಇಲಾಖೆಯವರು ಹಾಲು ಮಡ್ಡಿ, ಸಾಗಾಟಕ್ಕೆ ಬಳಸಿದ ಆಟೋರಿಕ್ಷಾ ಹಾಗೂ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ಅ.7ರಂದು ವಿಟ್ಲ ಸಮೀಪದ ಚಂದಳಿಕೆಯಲ್ಲಿ ನಡೆದಿದೆ.

ಕೆದಿಲ ಪಾಟ್ರಕೋಡಿ ನಿವಾಸಿಗಳಾದ ಉಮ್ಮರ್ ಫಾರೂಕ್ (44), ಮಹಮ್ಮದ್ ಹಸೈನಾರ್( 30), ಆಲಿ ಹೈದರ್ ಎಂ.ಕೆ ಮತ್ತು ತಾಳಿಪಡ್ಪು ಉಮ್ಮರ್ ಪಾರೂಕ್ (26) ಬಂಧಿತ ಆರೋಪಿಗಳು.

ಉಕ್ಕುಡ ಸಮೀಪದ ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಪುತ್ತೂರು ವಲಯಾರಣ್ಯಾಧಿಕಾರಿ ಕಿರಣ್ ಬಿ.ಎಂ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

ಆರೋಪಿಗಳು ಆಲುಮಡ್ಡಿ ಸಾಗಾಟಕ್ಕೆ ಬಳಕೆ ಮಾಡಿದ್ದ ಅಟೋ ರಿಕ್ಷಾ ಸಹಿತ ರೂ. 1.5 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 4 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಪುತ್ತೂರು ವಲಯಾರಣ್ಯಾಧಿಕಾರಿ ಕಿರಣ್ ಬಿ.ಎಂ. ನೇತೃತ್ವದಲ್ಲಿ ಉಪ ವಲಯಾರಣ್ಯಾಧಿಕಾರಿ ವೀರಣ್ಣ, ಪ್ರಕಾಶ್, ಗೌರೀಶ್, ದಸ್ತು ಅರಣ್ಯ ಪಾಲಕರಾದ ಸತೀಶ್, ಚಾಲಕರಾದ ರಾಜೇಶ್, ತೇಜ ಪ್ರಸಾದ್ ಹಾಗೂ ಸಿಬಂದಿ ವಿನೋದ್ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

- Advertisement -

Related news

error: Content is protected !!