ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮಾ.13 ಮತ್ತು 14 ರಂದು ನಡೆದ 28ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳ ಕೂಟದ ಫಲಿತಾಂಶ ಪ್ರಕಟಗೊಂಡಿದೆ. ಕಂಬಳ ಕೂಟದಲ್ಲಿ ಒಟ್ಟು 155 ಜೊತೆ ಕೋಣಗಳು ಭಾಗವಹಿಸಿತ್ತು.
ಕಂಬಳದಲ್ಲಿ ಕನೆಹಲಗೆ ವಿಭಾಗದಲ್ಲಿ ಏಳು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಆರು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 12 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 26 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 17 ಜೊತೆ, ನೇಗಿಲು ಕಿರಿಯ ವಿಭಾಗದಲ್ಲಿ 86 ಜೊತೆ ಕೋಣಗಳು ಪಾಲ್ಗೊಂಡಿದ್ದವು.
ಹೀಗಿದೆ ಫಲಿತಾಂಶ ಪಟ್ಟಿ
ಕನೆಹಲಗೆ: ಬಾರ್ಕೂರು ಶಾಂತಾರಾಮ ಶೆಟ್ಟಿ “ಬಿ”
ಓಡಿಸಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್ (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಅಡ್ಡ ಹಲಗೆ
ಪ್ರಥಮ: ಮೇರಮಜಲ್ ಮಿಶನ್ ಗಾಡ್ವಿನ್ ವೆಲ್ವಿನ್ ವಾಸ್
ಹಲಗೆ ಮುಟ್ಟಿದವರು: ಬೈಂದೂರು ಹೊಸಮನೆ ಮಹೇಶ್ ಪೂಜಾರಿ
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಓಡಿಸಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್
ಹಗ್ಗ ಹಿರಿಯ:
ಪ್ರಥಮ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “ಬಿ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ನಂದಳಿಕೆ ನವ್ಯತ – ನಮೃತ ಶೀಕಾಂತ್ ಭಟ್ “ಬಿ”
ಓಡಿಸಿದವರು: ಗುರು ಚರಣ್ ಪಟ್ಟೆ
ಹಗ್ಗ ಕಿರಿಯ:
ಪ್ರಥಮ: ಮೂಡಬಿದ್ರೆ ನ್ಯೂ ಪಡಿವಾಳ್ಸ್ ಹಾರ್ದಿಕ್ ಹರ್ಷವರ್ಧನ ಪಡಿವಾಳ್ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಸಿದ್ಧಕಟ್ಟೆ ಹೊಂಗಾರಹಿತ್ಲು ಮೋಕ್ಷಿತ್ ಕಾಂತಣ್ಣ ಶೆಟ್ಟಿ
ಓಡಿಸಿದವರು: ನಕ್ರೆ ಮಂಜುನಾಥ ಭಂಡಾರಿ
ನೇಗಿಲು ಹಿರಿಯ:
ಪ್ರಥಮ: ಬೋಳದ ಗುತ್ತು ಜಗದೀಶ್ ಶೆಟ್ಟಿ “ಎ”
ಓಡಿಸಿದವರು: ಮರೋಡಿ ಶ್ರೀಧರ್
ದ್ವಿತೀಯ: ಇರುವೈಲು ಪಾನಿಲ ಬಾಡ ಪೂಜಾರಿ “ಬಿ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ನೇಗಿಲು ಕಿರಿಯ:
ಪ್ರಥಮ: ಕಾಂತಾವರ ಬಾಂದೊಟ್ಟು ನಿಖಿಲ್ ಮೋಕ್ಷಿತ್ ಕುಮಾರ್
ಓಡಿಸಿದವರು: ಮರೋಡಿ ಶ್ರೀಧರ್
ದ್ವಿತೀಯ: ಅಳಿಯೂರು ಮಿತ್ತೊಟ್ಟು ಸೀತಾರಾಮ ಆನಂದ ಶೆಟ್ಟಿ
ಓಡಿಸಿದವರು: ಮಾಂಟ್ರಾಡಿ ರಾಜೇಶ್ ಆಚಾರ್ಯ