- Advertisement -
- Advertisement -
ಪುತ್ತೂರು(ನ.1): ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ೨೦೨೦ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಭಾಗವಹಿಸಿ ಸಾಧಕರಿಗೆ ತಾಲೂಕು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.
ಜೊತೆಗೆ ಈ ಸಾಲಿನ ಎಸ್ಎಸ್.ಎಲ್.ಸಿ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಿದರು.ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತರಾದ ಶ್ರೀ ಯತೀಶ್ ಉಳ್ಳಾಲ್, ತಹಶೀಲ್ದಾರ್ ಶ್ರೀ ರಮೇಶ್ ಬಾಬು, ಎಎಸ್ಪಿ ಶ್ರೀ ಲಖನ್ ಸಿಂಗ್ ಯಾದವ್, ಪೌರಾಯುಕ್ತರಾದ ಶ್ರೀಮತಿ ರೂಪಾ ಶೆಟ್ಟಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಶ್ರೀ ನವೀನ್ ಭಂಡಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಲೋಕೇಶ್ ಹಾಗೂ ಅಧಿಕಾರಿ ವರ್ಗದವರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
.
- Advertisement -