Thursday, May 2, 2024
spot_imgspot_img
spot_imgspot_img

ಪುತ್ತೂರು: ಹೆಜ್ಜೇನು ಕಡಿದು ವ್ಯಕ್ತಿ ಮೃತ್ಯು..!!

- Advertisement -G L Acharya panikkar
- Advertisement -

ಪುತ್ತೂರು: ಕಟ್ಟಿಗೆಗಾಗಿ ಮನೆಯ ಪಕ್ಕದ ಗುಡ್ಡೆಗೆ ಹೋಗಿದ್ದ ವೇಳೆ ಹೆಜ್ಜೇನು(ಪಿಲಿಕುಡೊಲು)ಕಡಿದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ ಮಾಯಿಲ ಎಂಬವರ ಪುತ್ರ ಗುರುವ(55ವ)ರವರು ಮೃತಪಟ್ಟವರು.

ಅವರು ಜು.23ರಂದು ಮಧಾಹ್ನ ಕಟ್ಟಿಗೆಗೆಂದು ಮನೆ ಪಕ್ಕದ ಗುಡ್ಡೆಗೆ ಹೋದವರು ಅರ್ಧ ಗಂಟೆ ಬಿಟ್ಟು ಗುಡ್ಡೆಯಿಂದ ಓಡೋಡಿ ಬಂದಾಗ ಅವರ ಮುಖ, ಕುತ್ತಿಗೆ, ಮೈಯೆಲ್ಲಾಯಾವುದೋ ನೊಣ ಕಚ್ಚಿ ಊದಿಕೊಂಡಿರುವುದು ಕಂಡು ಬಂದಿತ್ತು. ಈ ಕುರಿತು ಅವರ ತಾಯಿ ವಿಚಾರಿಸಿದಾಗ ಹೆಜ್ಜೇನು ಕಚ್ಚಿರುವುದಾಗಿ ಗುರುವ ಅವರು ತಿಳಿಸಿದ್ದರು.

ತಕ್ಷಣ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ಅವರು ಮೃತಪಟ್ಟಿದ್ದಾರೆ.ಸಂಪ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!